ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಅರಮನೆ ವೇದಿಕೆಯಲ್ಲಿ ನಡೆಯುವ ವೈಭವಯುತ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಹೀಗಿದೆ.
ಸಂಜೆ 4 ಗಂಟೆಯಿಂದ 4.30 ಗಂಟೆಯವರೆಗೆ ಎಂ.ಎನ್ ಗಣೇಶ್ ಮತ್ತು ತಂಡದವರಿಂದ ನಾದಸ್ವರ ನಡೆಯಲಿದ್ದು, ಸಂಜೆ 4.30 ಗಂಟೆಯಿಂದ 5 ಗಂಟೆಯವರೆಗೆ ಶಿವಶರಣ್ಯ ಎಸ್.ಸ್ವಾಮಿ ಮತ್ತು ತಂಡದಿಂದ ತತ್ವಪದ ಗಾಯನ ಏರ್ಪಡಿಸಲಾಗಿದೆ. ಸಂಜೆ 5 ಗಂಟೆಯಿಂದ 5.30 ಗಂಟೆಯವರೆಗೆ ಭಾರತೀಯ ವಿದ್ಯಾಭವನ (ಕಲಾಭಾರತಿ) ರವರಿಂದ ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ ಆಯೋಜಿಸಲಾಗಿದ್ದು, ಸಂಜೆ 5.30 ಗಂಟೆಯಿಂದ 6 ಗಂಟೆಯವರೆಗೆ ಕನ್ನಡ ಕಲಾಲಯ ಟ್ರಸ್ಟ್ ನ ವಿದುಷಿ ಪ್ರಿಯಾಂಕ ಎಲ್ ರವರಿಂದ ನೃತ್ಯರೂಪಕ ನವದುರ್ಗಾವೈಭವ ಕಾರ್ಯಕ್ರಮ ನಡೆಯಲಿದೆ.
ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ ಪಂಡಿತ್ ನರಸಿಂಹಲು ವಡವಾಟಿ ಮತ್ತು ವಿದ್ವಾನ್ ಕದ್ರಿ ರಮೇಶ್ ನಾಥ್ ಅವರಿಂದ ಕ್ಲಾರಿಯೋನೆಟ್-ಸ್ಯಾಕ್ಸೋಫೋನ್ ಜುಗಲ್ ಬಂದಿ ನಡೆಯಲಿದ್ದು, ರಾತ್ರಿ 7 ಗಂಟೆಯಿಂದ 7.10 ರವರೆಗೆ ಶರಣ್ಯ ನಟರಾಜ್ ಮತ್ತು ತಂಡದವರಿಂದ ಕಥಕ್ ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ. ರಾತ್ರಿ 7.10 ಗಂಟೆಯಿಂದ 8.40 ರವರೆಗೆ ಎಚ್ ಜನಾರ್ದನ್ (ಜನ್ನಿ) ಮತ್ತು ತಂಡದವರಿಂದ ಜನಪದ ಸಂಭ್ರಮ ನಡೆಯಲಿದ್ದು, ರಾತ್ರಿ 8.40 ರಿಂದ 10.10 ರವರೆಗೆ ಅಗಮ್ ಬ್ಯಾಂಡ್ – ಹರೀಶ್ ಕೃಷ್ಣನ್ ಅವರಿಂದ ಕರ್ನಾಟಕ ಶಾಸ್ತ್ರೀಯ ವಾದ್ಯವೃಂದ ನಡೆಯಲಿದೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…