ನಮ್ಮ ಮೈಸೂರ ದಸರಾ 2024

ಇಂದು ಅರಮನೆ ವೇದಿಕೆಯಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಅರಮನೆ ವೇದಿಕೆಯಲ್ಲಿ ನಡೆಯುವ ವೈಭವಯುತ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಹೀಗಿದೆ.

ಸಂಜೆ 4 ಗಂಟೆಯಿಂದ 4.30 ಗಂಟೆಯವರೆಗೆ ಎಂ.ಎನ್ ಗಣೇಶ್ ಮತ್ತು ತಂಡದವರಿಂದ ನಾದಸ್ವರ ನಡೆಯಲಿದ್ದು, ಸಂಜೆ 4.30 ಗಂಟೆಯಿಂದ 5 ಗಂಟೆಯವರೆಗೆ ಶಿವಶರಣ್ಯ ಎಸ್.ಸ್ವಾಮಿ ಮತ್ತು ತಂಡದಿಂದ ತತ್ವಪದ ಗಾಯನ ಏರ್ಪಡಿಸಲಾಗಿದೆ. ಸಂಜೆ 5 ಗಂಟೆಯಿಂದ 5.30 ಗಂಟೆಯವರೆಗೆ ಭಾರತೀಯ ವಿದ್ಯಾಭವನ (ಕಲಾಭಾರತಿ) ರವರಿಂದ ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ ಆಯೋಜಿಸಲಾಗಿದ್ದು, ಸಂಜೆ 5.30 ಗಂಟೆಯಿಂದ 6 ಗಂಟೆಯವರೆಗೆ ಕನ್ನಡ ಕಲಾಲಯ ಟ್ರಸ್ಟ್ ನ ವಿದುಷಿ ಪ್ರಿಯಾಂಕ ಎಲ್ ರವರಿಂದ ನೃತ್ಯರೂಪಕ ನವದುರ್ಗಾವೈಭವ ಕಾರ್ಯಕ್ರಮ ನಡೆಯಲಿದೆ.

ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ ಪಂಡಿತ್ ನರಸಿಂಹಲು ವಡವಾಟಿ ಮತ್ತು ವಿದ್ವಾನ್ ಕದ್ರಿ ರಮೇಶ್ ನಾಥ್ ಅವರಿಂದ ಕ್ಲಾರಿಯೋನೆಟ್-ಸ್ಯಾಕ್ಸೋಫೋನ್ ಜುಗಲ್ ಬಂದಿ ನಡೆಯಲಿದ್ದು, ರಾತ್ರಿ 7 ಗಂಟೆಯಿಂದ 7.10 ರವರೆಗೆ ಶರಣ್ಯ ನಟರಾಜ್ ಮತ್ತು ತಂಡದವರಿಂದ ಕಥಕ್ ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ. ರಾತ್ರಿ 7.10 ಗಂಟೆಯಿಂದ 8.40 ರವರೆಗೆ ಎಚ್ ಜನಾರ್ದನ್ (ಜನ್ನಿ) ಮತ್ತು ತಂಡದವರಿಂದ ಜನಪದ ಸಂಭ್ರಮ ನಡೆಯಲಿದ್ದು, ರಾತ್ರಿ 8.40 ರಿಂದ 10.10 ರವರೆಗೆ ಅಗಮ್ ಬ್ಯಾಂಡ್ – ಹರೀಶ್ ಕೃಷ್ಣನ್ ಅವರಿಂದ ಕರ್ನಾಟಕ ಶಾಸ್ತ್ರೀಯ ವಾದ್ಯವೃಂದ ನಡೆಯಲಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

9 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

10 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

12 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

16 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

17 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

23 hours ago