ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿಯ ಅಂಗವಾಗಿ ಇಂದು ಮೈಸೂರು ಅರಮನೆಯಲ್ಲಿ ಐತಿಹಾಸಿಕ ಜಟ್ಟಿ ಕಾಳಗ ನಡೆಯಿತು.
ಜಟ್ಟಿ ಕಾಳಗ ಅಥವಾ ವಜ್ರಮುಷ್ಠಿ ಕಾಳಗ ದಸರೆಯ ಅತ್ಯಂತ ಭಾಗಗಳಲ್ಲೊಂದು. ಮೈಸೂರಿನ ರಾಜಾಶ್ರಯದಲ್ಲಿ ಬೆಳೆದು ಬಂದಿರುವ ಈ ಕಾಳಗ ವಿಜಯದಶಮಿಯಂದು ಅಂಬಾರಿಯು ಅರಮನೆಯಿಂದ ಹೊರಡುವ ಮುನ್ನ ನಡೆಯುವ ಸಾಂಪ್ರದಾಯಿಕ ಕ್ರೀಡೆ.
ಇತಿಹಾಸದ ಪ್ರಕಾರ ವಜ್ರಮುಷ್ಠಿ ಕಾಳಗ ಮುಗಿದ ನಂತರವಷ್ಟೇ ಅಂಬಾರಿ ಅರಮನೆಯಿಂದ ಹೊರಡುವ ಪ್ರತೀತಿಯಿದೆ.
ಈ ಹಿನ್ನೆಲೆಯಲ್ಲಿಂದು ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ಕೃತಕವಾಗಿ ನಿರ್ಮಿಸಿದ ಮಟ್ಟಿ ಅಖಾಡದಲ್ಲಿ ಆನೆ ದಂತದಿಂದ ತಯಾರಿಸಿದ ವಜ್ರನಖ ಎಂಬ ಆಯುಧವನ್ನು ಕೈಗಳಿಗೆ ಧರಿಸಿದ ಜಟ್ಟಿಗಳು ಪರಸ್ಪರ ಕಾದಾಟಕ್ಕಿಳಿದರು.
ಎದುರಾಳಿ ಜಟ್ಟಿಯ ತಲೆಯಿಂದ ರಕ್ತ ಬಂದ ಕೂಡಲೇ ಕಾಳಗ ಕೊನೆಗೊಂಡಿತು. ರಕ್ತ ಬಂದವರು ಸೋತರೆ, ಅದಕ್ಕೆ ಕಾರಣರಾದವರು ಮೇಲುಗೈ ಸಾಧಿಸಿದರು.
ಮೈಸೂರಿನ ಬಲರಾಮ ಜಟ್ಟಿ ಹಾಗೂ ನಾರಾಯಣ ಜಟ್ಟಿ ನಡುವೆ ಜಟ್ಟಿ ಕಾಳಗ ನಡೆದಿದೆ.
ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗವನ್ನು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ವೀಕ್ಷಣೆ ಮಾಡಿದರು.
ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ…
ಎಚ್.ಡಿ.ಕೋಟೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ವಾತಾವರಣ…
ವಿಮಾ ವಲಯದಲ್ಲಿ ಶೇ. ೧೦೦ ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ(ಎ-ಡಿಐ)ಯಿಂದ ವಿಮಾ ರಕ್ಷಣೆ ಪಡೆದ ಜೀವಗಳ ಮತ್ತು ಆಸ್ತಿಗಳ…
ರಾಜ್ಯದ ಅತ್ಯಂತ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರೆನಿಸಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪನವರ ನಿಧನ ನಿಜಕ್ಕೂ ನೋವಿನ ಸಂಗತಿ. ದೇಶದ…
ಶತ್ರುಗಳಿಗೆ ಸೆರೆ ಸಿಕ್ಕು ಚಿತ್ರ ಹಿಂಸೆ ಅನುಭವಿಸಿದರೂ ಗುಟ್ಟು ಬಿಡದ ನೂರ್ ಇನಾಯತ್ ಖಾನ್ ನವೆಂಬರ್ ತಿಂಗಳಲ್ಲಿ ಫ್ರಾನ್ಸ್ ಸರ್ಕಾರ…
ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ…