ನಮ್ಮ ಮೈಸೂರ ದಸರಾ 2024

ಮೈಸೂರು ಅರಮನೆಯಲ್ಲಿ ಐತಿಹಾಸಿಕ ಜಟ್ಟಿ ಕಾಳಗ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿಯ ಅಂಗವಾಗಿ ಇಂದು ಮೈಸೂರು ಅರಮನೆಯಲ್ಲಿ ಐತಿಹಾಸಿಕ ಜಟ್ಟಿ ಕಾಳಗ ನಡೆಯಿತು.

ಜಟ್ಟಿ ಕಾಳಗ ಅಥವಾ ವಜ್ರಮುಷ್ಠಿ ಕಾಳಗ ದಸರೆಯ ಅತ್ಯಂತ ಭಾಗಗಳಲ್ಲೊಂದು. ಮೈಸೂರಿನ ರಾಜಾಶ್ರಯದಲ್ಲಿ ಬೆಳೆದು ಬಂದಿರುವ ಈ ಕಾಳಗ ವಿಜಯದಶಮಿಯಂದು ಅಂಬಾರಿಯು ಅರಮನೆಯಿಂದ ಹೊರಡುವ ಮುನ್ನ ನಡೆಯುವ ಸಾಂಪ್ರದಾಯಿಕ ಕ್ರೀಡೆ.

ಇತಿಹಾಸದ ಪ್ರಕಾರ ವಜ್ರಮುಷ್ಠಿ ಕಾಳಗ ಮುಗಿದ ನಂತರವಷ್ಟೇ ಅಂಬಾರಿ ಅರಮನೆಯಿಂದ ಹೊರಡುವ ಪ್ರತೀತಿಯಿದೆ.

ಈ ಹಿನ್ನೆಲೆಯಲ್ಲಿಂದು ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ಕೃತಕವಾಗಿ ನಿರ್ಮಿಸಿದ ಮಟ್ಟಿ ಅಖಾಡದಲ್ಲಿ ಆನೆ ದಂತದಿಂದ ತಯಾರಿಸಿದ ವಜ್ರನಖ ಎಂಬ ಆಯುಧವನ್ನು ಕೈಗಳಿಗೆ ಧರಿಸಿದ ಜಟ್ಟಿಗಳು ಪರಸ್ಪರ ಕಾದಾಟಕ್ಕಿಳಿದರು.

ಎದುರಾಳಿ ಜಟ್ಟಿಯ ತಲೆಯಿಂದ ರಕ್ತ ಬಂದ ಕೂಡಲೇ ಕಾಳಗ ಕೊನೆಗೊಂಡಿತು. ರಕ್ತ ಬಂದವರು ಸೋತರೆ, ಅದಕ್ಕೆ ಕಾರಣರಾದವರು ಮೇಲುಗೈ ಸಾಧಿಸಿದರು.

ಮೈಸೂರಿನ ಬಲರಾಮ ಜಟ್ಟಿ ಹಾಗೂ ನಾರಾಯಣ ಜಟ್ಟಿ ನಡುವೆ ಜಟ್ಟಿ ಕಾಳಗ ನಡೆದಿದೆ.

ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗವನ್ನು ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಅವರು ವೀಕ್ಷಣೆ ಮಾಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

5 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

5 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

6 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

7 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

7 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

8 hours ago