ನಮ್ಮ ಮೈಸೂರ ದಸರಾ 2024

ಮೈಸೂರು ಅರಮನೆಯಲ್ಲಿ ಐತಿಹಾಸಿಕ ಜಟ್ಟಿ ಕಾಳಗ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿಯ ಅಂಗವಾಗಿ ಇಂದು ಮೈಸೂರು ಅರಮನೆಯಲ್ಲಿ ಐತಿಹಾಸಿಕ ಜಟ್ಟಿ ಕಾಳಗ ನಡೆಯಿತು.

ಜಟ್ಟಿ ಕಾಳಗ ಅಥವಾ ವಜ್ರಮುಷ್ಠಿ ಕಾಳಗ ದಸರೆಯ ಅತ್ಯಂತ ಭಾಗಗಳಲ್ಲೊಂದು. ಮೈಸೂರಿನ ರಾಜಾಶ್ರಯದಲ್ಲಿ ಬೆಳೆದು ಬಂದಿರುವ ಈ ಕಾಳಗ ವಿಜಯದಶಮಿಯಂದು ಅಂಬಾರಿಯು ಅರಮನೆಯಿಂದ ಹೊರಡುವ ಮುನ್ನ ನಡೆಯುವ ಸಾಂಪ್ರದಾಯಿಕ ಕ್ರೀಡೆ.

ಇತಿಹಾಸದ ಪ್ರಕಾರ ವಜ್ರಮುಷ್ಠಿ ಕಾಳಗ ಮುಗಿದ ನಂತರವಷ್ಟೇ ಅಂಬಾರಿ ಅರಮನೆಯಿಂದ ಹೊರಡುವ ಪ್ರತೀತಿಯಿದೆ.

ಈ ಹಿನ್ನೆಲೆಯಲ್ಲಿಂದು ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ಕೃತಕವಾಗಿ ನಿರ್ಮಿಸಿದ ಮಟ್ಟಿ ಅಖಾಡದಲ್ಲಿ ಆನೆ ದಂತದಿಂದ ತಯಾರಿಸಿದ ವಜ್ರನಖ ಎಂಬ ಆಯುಧವನ್ನು ಕೈಗಳಿಗೆ ಧರಿಸಿದ ಜಟ್ಟಿಗಳು ಪರಸ್ಪರ ಕಾದಾಟಕ್ಕಿಳಿದರು.

ಎದುರಾಳಿ ಜಟ್ಟಿಯ ತಲೆಯಿಂದ ರಕ್ತ ಬಂದ ಕೂಡಲೇ ಕಾಳಗ ಕೊನೆಗೊಂಡಿತು. ರಕ್ತ ಬಂದವರು ಸೋತರೆ, ಅದಕ್ಕೆ ಕಾರಣರಾದವರು ಮೇಲುಗೈ ಸಾಧಿಸಿದರು.

ಮೈಸೂರಿನ ಬಲರಾಮ ಜಟ್ಟಿ ಹಾಗೂ ನಾರಾಯಣ ಜಟ್ಟಿ ನಡುವೆ ಜಟ್ಟಿ ಕಾಳಗ ನಡೆದಿದೆ.

ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗವನ್ನು ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಅವರು ವೀಕ್ಷಣೆ ಮಾಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

43 mins ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

49 mins ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

1 hour ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

2 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

2 hours ago

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…

3 hours ago