ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿಯ ಅಂಗವಾಗಿ ಇಂದು ಮೈಸೂರು ಅರಮನೆಯಲ್ಲಿ ಐತಿಹಾಸಿಕ ಜಟ್ಟಿ ಕಾಳಗ ನಡೆಯಿತು.
ಜಟ್ಟಿ ಕಾಳಗ ಅಥವಾ ವಜ್ರಮುಷ್ಠಿ ಕಾಳಗ ದಸರೆಯ ಅತ್ಯಂತ ಭಾಗಗಳಲ್ಲೊಂದು. ಮೈಸೂರಿನ ರಾಜಾಶ್ರಯದಲ್ಲಿ ಬೆಳೆದು ಬಂದಿರುವ ಈ ಕಾಳಗ ವಿಜಯದಶಮಿಯಂದು ಅಂಬಾರಿಯು ಅರಮನೆಯಿಂದ ಹೊರಡುವ ಮುನ್ನ ನಡೆಯುವ ಸಾಂಪ್ರದಾಯಿಕ ಕ್ರೀಡೆ.
ಇತಿಹಾಸದ ಪ್ರಕಾರ ವಜ್ರಮುಷ್ಠಿ ಕಾಳಗ ಮುಗಿದ ನಂತರವಷ್ಟೇ ಅಂಬಾರಿ ಅರಮನೆಯಿಂದ ಹೊರಡುವ ಪ್ರತೀತಿಯಿದೆ.
ಈ ಹಿನ್ನೆಲೆಯಲ್ಲಿಂದು ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ಕೃತಕವಾಗಿ ನಿರ್ಮಿಸಿದ ಮಟ್ಟಿ ಅಖಾಡದಲ್ಲಿ ಆನೆ ದಂತದಿಂದ ತಯಾರಿಸಿದ ವಜ್ರನಖ ಎಂಬ ಆಯುಧವನ್ನು ಕೈಗಳಿಗೆ ಧರಿಸಿದ ಜಟ್ಟಿಗಳು ಪರಸ್ಪರ ಕಾದಾಟಕ್ಕಿಳಿದರು.
ಎದುರಾಳಿ ಜಟ್ಟಿಯ ತಲೆಯಿಂದ ರಕ್ತ ಬಂದ ಕೂಡಲೇ ಕಾಳಗ ಕೊನೆಗೊಂಡಿತು. ರಕ್ತ ಬಂದವರು ಸೋತರೆ, ಅದಕ್ಕೆ ಕಾರಣರಾದವರು ಮೇಲುಗೈ ಸಾಧಿಸಿದರು.
ಮೈಸೂರಿನ ಬಲರಾಮ ಜಟ್ಟಿ ಹಾಗೂ ನಾರಾಯಣ ಜಟ್ಟಿ ನಡುವೆ ಜಟ್ಟಿ ಕಾಳಗ ನಡೆದಿದೆ.
ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗವನ್ನು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ವೀಕ್ಷಣೆ ಮಾಡಿದರು.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…