ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿಯ ಅಂಗವಾಗಿ ಇಂದು ಮೈಸೂರು ಅರಮನೆಯಲ್ಲಿ ಐತಿಹಾಸಿಕ ಜಟ್ಟಿ ಕಾಳಗ ನಡೆಯಿತು.
ಜಟ್ಟಿ ಕಾಳಗ ಅಥವಾ ವಜ್ರಮುಷ್ಠಿ ಕಾಳಗ ದಸರೆಯ ಅತ್ಯಂತ ಭಾಗಗಳಲ್ಲೊಂದು. ಮೈಸೂರಿನ ರಾಜಾಶ್ರಯದಲ್ಲಿ ಬೆಳೆದು ಬಂದಿರುವ ಈ ಕಾಳಗ ವಿಜಯದಶಮಿಯಂದು ಅಂಬಾರಿಯು ಅರಮನೆಯಿಂದ ಹೊರಡುವ ಮುನ್ನ ನಡೆಯುವ ಸಾಂಪ್ರದಾಯಿಕ ಕ್ರೀಡೆ.
ಇತಿಹಾಸದ ಪ್ರಕಾರ ವಜ್ರಮುಷ್ಠಿ ಕಾಳಗ ಮುಗಿದ ನಂತರವಷ್ಟೇ ಅಂಬಾರಿ ಅರಮನೆಯಿಂದ ಹೊರಡುವ ಪ್ರತೀತಿಯಿದೆ.
ಈ ಹಿನ್ನೆಲೆಯಲ್ಲಿಂದು ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ಕೃತಕವಾಗಿ ನಿರ್ಮಿಸಿದ ಮಟ್ಟಿ ಅಖಾಡದಲ್ಲಿ ಆನೆ ದಂತದಿಂದ ತಯಾರಿಸಿದ ವಜ್ರನಖ ಎಂಬ ಆಯುಧವನ್ನು ಕೈಗಳಿಗೆ ಧರಿಸಿದ ಜಟ್ಟಿಗಳು ಪರಸ್ಪರ ಕಾದಾಟಕ್ಕಿಳಿದರು.
ಎದುರಾಳಿ ಜಟ್ಟಿಯ ತಲೆಯಿಂದ ರಕ್ತ ಬಂದ ಕೂಡಲೇ ಕಾಳಗ ಕೊನೆಗೊಂಡಿತು. ರಕ್ತ ಬಂದವರು ಸೋತರೆ, ಅದಕ್ಕೆ ಕಾರಣರಾದವರು ಮೇಲುಗೈ ಸಾಧಿಸಿದರು.
ಮೈಸೂರಿನ ಬಲರಾಮ ಜಟ್ಟಿ ಹಾಗೂ ನಾರಾಯಣ ಜಟ್ಟಿ ನಡುವೆ ಜಟ್ಟಿ ಕಾಳಗ ನಡೆದಿದೆ.
ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗವನ್ನು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ವೀಕ್ಷಣೆ ಮಾಡಿದರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…