ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮೈಸೂರಿಗೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆಯಿಟ್ಟಿದ್ದಾರೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಫಲಫುಷ್ಪ ಪ್ರದರ್ಶನ, ಆಹಾರ ಮೇಳ ನೋಡುವುದರ ಜೊತೆ ಜೊತೆಗೆ ಮೈಸೂರು ಅರಮನೆ, ಮೃಗಾಲಯ ಹಾಗೂ ಚಾಮುಂಡಿಬೆಟ್ಟ ನೋಡಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ.
ಇಂದು ಭಾನುವಾರದ ರಜೆ ಇರುವುದರಿಂದ ಮಕ್ಕಳೊಂದಿಗೆ ಮೈಸೂರಿಗೆ ಬಂದಿರುವ ಜನತೆ ಮೈಸೂರಿನಲ್ಲಿ ರೌಂಡ್ಸ್ ಹಾಕಿ ಖುಷಿಪಡುತ್ತಿದ್ದಾರೆ.
ಇನ್ನು ಸಂಜೆಯ ವೇಳೆಗೆ ದೀಪಾಲಂಕಾರ ನೋಡಲು ಕೂಡ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಲಿದ್ದು, ಪ್ರಮುಖ ರಸ್ತೆಗಳಲ್ಲಂತೂ ಟ್ರಾಫಿಕ್ ಸಮಸ್ಯೆ ಉಂಟಾಗಲಿದೆ.
ಈ ಹಿನ್ನೆಲೆಯಲ್ಲಿ ಸಂಜೆಯ ವೇಳೆಗೆ ಪೊಲೀಸರು ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಿದ್ದು, ಸಂಚಾರಕ್ಕೆ ಅನುವು ಮಾಡಿಕೊಡಲಿದ್ದಾರೆ.
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…
ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ…
ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು…