ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿಂದು ದಸರಾ ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಯಿತು.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ಸ್ ವ್ಹೇಬ್ರಿಡ್ಜ್ನಲ್ಲಿ ನಡೆದ ತೂಕ ಪರೀಕ್ಷೆಯಲ್ಲಿ ಕ್ಯಾಪ್ಟನ್ ಅಭಿಮನ್ಯು ಆನೆ 5820 ಕೆಜಿ ತೂಕವಿದ್ದು, ವರಲಕ್ಷ್ಮೀ 3555, ಭೀಮ 5380, ಏಕಲವ್ಯ 5095, ಲಕ್ಷ್ಮಿ 2625, ರೋಹಿತ್ 3930, ಗೋಪಿ 5280, ಕಂಜನ್ 4725 ಹಾಗೂ ಧನಂಜಯ ಆನೆ 5255 ಕೆಜಿ ತೂಕ ಹೊಂದಿದೆ.
ಇನ್ನು ಎರಡನೇ ತಂಡದಲ್ಲಿ ಮೈಸೂರಿಗೆ ಆಗಮಿಸಿದ ಆನೆಗಳಿಗೂ ಸಹ ತೂಕ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಪ್ರಶಾಂತ ಆನೆ 5240 ಕೆಜಿ ತೂಕವಿದ್ದು, ಹಿರಣ್ಯ ಆನೆ 3160, ಮಹೇಂದ್ರ 5150, ದೊಡ್ಡ ಹರವೆ ಲಕ್ಷ್ಮಿ 3570, ಸುಗ್ರೀವ 5545 ಕೆಜಿ ತೂಕವಿದೆ.
ಒಟ್ಟಾರೆ ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ಆನೆಯೇ ತೂಕದಲ್ಲಿ ಬಲ ಭೀಮನಾಗಿದ್ದು, ವಿಜಯದಶಮಿ ಜಂಬೂಸವಾರಿ ದಿನ ಚಿನ್ನದ ಅಂಬಾರಿ ಹೊತ್ತು ಸಾಗಲು ಸರ್ವ ರೀತಿಯಲ್ಲೂ ಸಜ್ಜಾಗಿದ್ದಾನೆ.
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…