ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿಂದು ದಸರಾ ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಯಿತು.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ಸ್ ವ್ಹೇಬ್ರಿಡ್ಜ್ನಲ್ಲಿ ನಡೆದ ತೂಕ ಪರೀಕ್ಷೆಯಲ್ಲಿ ಕ್ಯಾಪ್ಟನ್ ಅಭಿಮನ್ಯು ಆನೆ 5820 ಕೆಜಿ ತೂಕವಿದ್ದು, ವರಲಕ್ಷ್ಮೀ 3555, ಭೀಮ 5380, ಏಕಲವ್ಯ 5095, ಲಕ್ಷ್ಮಿ 2625, ರೋಹಿತ್ 3930, ಗೋಪಿ 5280, ಕಂಜನ್ 4725 ಹಾಗೂ ಧನಂಜಯ ಆನೆ 5255 ಕೆಜಿ ತೂಕ ಹೊಂದಿದೆ.
ಇನ್ನು ಎರಡನೇ ತಂಡದಲ್ಲಿ ಮೈಸೂರಿಗೆ ಆಗಮಿಸಿದ ಆನೆಗಳಿಗೂ ಸಹ ತೂಕ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಪ್ರಶಾಂತ ಆನೆ 5240 ಕೆಜಿ ತೂಕವಿದ್ದು, ಹಿರಣ್ಯ ಆನೆ 3160, ಮಹೇಂದ್ರ 5150, ದೊಡ್ಡ ಹರವೆ ಲಕ್ಷ್ಮಿ 3570, ಸುಗ್ರೀವ 5545 ಕೆಜಿ ತೂಕವಿದೆ.
ಒಟ್ಟಾರೆ ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ಆನೆಯೇ ತೂಕದಲ್ಲಿ ಬಲ ಭೀಮನಾಗಿದ್ದು, ವಿಜಯದಶಮಿ ಜಂಬೂಸವಾರಿ ದಿನ ಚಿನ್ನದ ಅಂಬಾರಿ ಹೊತ್ತು ಸಾಗಲು ಸರ್ವ ರೀತಿಯಲ್ಲೂ ಸಜ್ಜಾಗಿದ್ದಾನೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…