ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿಂದು ದಸರಾ ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಯಿತು.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ಸ್ ವ್ಹೇಬ್ರಿಡ್ಜ್ನಲ್ಲಿ ನಡೆದ ತೂಕ ಪರೀಕ್ಷೆಯಲ್ಲಿ ಕ್ಯಾಪ್ಟನ್ ಅಭಿಮನ್ಯು ಆನೆ 5820 ಕೆಜಿ ತೂಕವಿದ್ದು, ವರಲಕ್ಷ್ಮೀ 3555, ಭೀಮ 5380, ಏಕಲವ್ಯ 5095, ಲಕ್ಷ್ಮಿ 2625, ರೋಹಿತ್ 3930, ಗೋಪಿ 5280, ಕಂಜನ್ 4725 ಹಾಗೂ ಧನಂಜಯ ಆನೆ 5255 ಕೆಜಿ ತೂಕ ಹೊಂದಿದೆ.
ಇನ್ನು ಎರಡನೇ ತಂಡದಲ್ಲಿ ಮೈಸೂರಿಗೆ ಆಗಮಿಸಿದ ಆನೆಗಳಿಗೂ ಸಹ ತೂಕ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಪ್ರಶಾಂತ ಆನೆ 5240 ಕೆಜಿ ತೂಕವಿದ್ದು, ಹಿರಣ್ಯ ಆನೆ 3160, ಮಹೇಂದ್ರ 5150, ದೊಡ್ಡ ಹರವೆ ಲಕ್ಷ್ಮಿ 3570, ಸುಗ್ರೀವ 5545 ಕೆಜಿ ತೂಕವಿದೆ.
ಒಟ್ಟಾರೆ ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ಆನೆಯೇ ತೂಕದಲ್ಲಿ ಬಲ ಭೀಮನಾಗಿದ್ದು, ವಿಜಯದಶಮಿ ಜಂಬೂಸವಾರಿ ದಿನ ಚಿನ್ನದ ಅಂಬಾರಿ ಹೊತ್ತು ಸಾಗಲು ಸರ್ವ ರೀತಿಯಲ್ಲೂ ಸಜ್ಜಾಗಿದ್ದಾನೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…