ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದಿರಲು ಲೇಖಕಿ ಬಾನು ಮುಷ್ತಾಕ್ ನಿರ್ಧಾರ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಅವರು, ತಮ್ಮ ತೀರ್ಮಾನ ತಿಳಿಸಿದ್ದಾರೆ.
ಈ ಮೊದಲು ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸಲು ಒಪ್ಪಿಗೆ ನೀಡಿದ್ದೆ. ಆದರೆ ಇತ್ತೀಚಿನ ಕೆಲವು ಸಂವಾದಗಳನ್ನು ನೋಡಿದಾಗ ಬೇರೆಯವರಿಗೆ ಅವಕಾಶ ಕೊಡುವುದು ಅಗತ್ಯವೆಂದು ಅನಿಸಿದೆ. ಹೀಗಾಗಿ ಈ ಬಾರಿಯ ಕವಿಗೋಷ್ಠಿಯಲ್ಲಿ ಭಾಗವಹಿಸಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.





