ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದಾರೆ.
ರಾಜಪೋಷಾಕಿನಲ್ಲಿ ಮಿಂಚಿದ ಯದುವೀರ್ ಅವರು, ಇಂದು ದರ್ಬಾರ್ ಹಾಲ್ನಲ್ಲಿ ಸಿಂಹಾಸನದ ಬಳಿ ತೆರಳಿ ಪೂಜೆ ಸಲ್ಲಿಸಿದರು.
ಬಳಿಕ ರತ್ನ ಖಚಿತ ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆ ನೆರವೇರಿಸಿದರು. ಬಳಿಕ ಸಿಂಹಾಸನದ ಮೇಲೆ ಕುಳಿತು ಖಾಸಗಿ ದರ್ಬಾರ್ ನಡೆಸಿದರು.
ಇದೇ ವೇಳೆ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಅವರು ಯದುವೀರ್ ಒಡೆಯರ್ರಿಗೆ ಪಾದಪೂಜೆ ಮಾಡಿದರು. ಇದೇ ವೇಳೆ ಯದುವೀರ್, ಹಲವು ದೇವಾಲಯಗಳಿಂದ ತಂದಿದ್ದ ಪ್ರಸಾದ ಸ್ವೀಕರಿಸಿದರು.
ಇನ್ನು ಸಂಸದರಾದ ಬಳಿಕ ಯದುವೀರ್ ಒಡೆಯರ್ ಅವರು ಮೊದಲ ಖಾಸಗಿ ದರ್ಬಾರ್ ನಡೆಸುತ್ತಿರುವುದು ಅತ್ಯಂತ ವಿಶೇಷವಾಗಿದೆ. ಜನರ ಜೊತೆ ಬೆರೆತು ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುವುದರ ಜೊತೆಗೆ ಸಂಪ್ರದಾಯಬದ್ಧವಾಗಿ ಬಂದಿರುವ ಆಚರಣೆಗಳನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…