ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದಾರೆ.
ರಾಜಪೋಷಾಕಿನಲ್ಲಿ ಮಿಂಚಿದ ಯದುವೀರ್ ಅವರು, ಇಂದು ದರ್ಬಾರ್ ಹಾಲ್ನಲ್ಲಿ ಸಿಂಹಾಸನದ ಬಳಿ ತೆರಳಿ ಪೂಜೆ ಸಲ್ಲಿಸಿದರು.
ಬಳಿಕ ರತ್ನ ಖಚಿತ ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆ ನೆರವೇರಿಸಿದರು. ಬಳಿಕ ಸಿಂಹಾಸನದ ಮೇಲೆ ಕುಳಿತು ಖಾಸಗಿ ದರ್ಬಾರ್ ನಡೆಸಿದರು.
ಇದೇ ವೇಳೆ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಅವರು ಯದುವೀರ್ ಒಡೆಯರ್ರಿಗೆ ಪಾದಪೂಜೆ ಮಾಡಿದರು. ಇದೇ ವೇಳೆ ಯದುವೀರ್, ಹಲವು ದೇವಾಲಯಗಳಿಂದ ತಂದಿದ್ದ ಪ್ರಸಾದ ಸ್ವೀಕರಿಸಿದರು.
ಇನ್ನು ಸಂಸದರಾದ ಬಳಿಕ ಯದುವೀರ್ ಒಡೆಯರ್ ಅವರು ಮೊದಲ ಖಾಸಗಿ ದರ್ಬಾರ್ ನಡೆಸುತ್ತಿರುವುದು ಅತ್ಯಂತ ವಿಶೇಷವಾಗಿದೆ. ಜನರ ಜೊತೆ ಬೆರೆತು ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುವುದರ ಜೊತೆಗೆ ಸಂಪ್ರದಾಯಬದ್ಧವಾಗಿ ಬಂದಿರುವ ಆಚರಣೆಗಳನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…
ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…