ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದಾರೆ.
ರಾಜಪೋಷಾಕಿನಲ್ಲಿ ಮಿಂಚಿದ ಯದುವೀರ್ ಅವರು, ಇಂದು ದರ್ಬಾರ್ ಹಾಲ್ನಲ್ಲಿ ಸಿಂಹಾಸನದ ಬಳಿ ತೆರಳಿ ಪೂಜೆ ಸಲ್ಲಿಸಿದರು.
ಬಳಿಕ ರತ್ನ ಖಚಿತ ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆ ನೆರವೇರಿಸಿದರು. ಬಳಿಕ ಸಿಂಹಾಸನದ ಮೇಲೆ ಕುಳಿತು ಖಾಸಗಿ ದರ್ಬಾರ್ ನಡೆಸಿದರು.
ಇದೇ ವೇಳೆ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಅವರು ಯದುವೀರ್ ಒಡೆಯರ್ರಿಗೆ ಪಾದಪೂಜೆ ಮಾಡಿದರು. ಇದೇ ವೇಳೆ ಯದುವೀರ್, ಹಲವು ದೇವಾಲಯಗಳಿಂದ ತಂದಿದ್ದ ಪ್ರಸಾದ ಸ್ವೀಕರಿಸಿದರು.
ಇನ್ನು ಸಂಸದರಾದ ಬಳಿಕ ಯದುವೀರ್ ಒಡೆಯರ್ ಅವರು ಮೊದಲ ಖಾಸಗಿ ದರ್ಬಾರ್ ನಡೆಸುತ್ತಿರುವುದು ಅತ್ಯಂತ ವಿಶೇಷವಾಗಿದೆ. ಜನರ ಜೊತೆ ಬೆರೆತು ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುವುದರ ಜೊತೆಗೆ ಸಂಪ್ರದಾಯಬದ್ಧವಾಗಿ ಬಂದಿರುವ ಆಚರಣೆಗಳನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…