ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದಾರೆ.
ರಾಜಪೋಷಾಕಿನಲ್ಲಿ ಮಿಂಚಿದ ಯದುವೀರ್ ಅವರು, ಇಂದು ದರ್ಬಾರ್ ಹಾಲ್ನಲ್ಲಿ ಸಿಂಹಾಸನದ ಬಳಿ ತೆರಳಿ ಪೂಜೆ ಸಲ್ಲಿಸಿದರು.
ಬಳಿಕ ರತ್ನ ಖಚಿತ ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆ ನೆರವೇರಿಸಿದರು. ಬಳಿಕ ಸಿಂಹಾಸನದ ಮೇಲೆ ಕುಳಿತು ಖಾಸಗಿ ದರ್ಬಾರ್ ನಡೆಸಿದರು.
ಇದೇ ವೇಳೆ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಅವರು ಯದುವೀರ್ ಒಡೆಯರ್ರಿಗೆ ಪಾದಪೂಜೆ ಮಾಡಿದರು. ಇದೇ ವೇಳೆ ಯದುವೀರ್, ಹಲವು ದೇವಾಲಯಗಳಿಂದ ತಂದಿದ್ದ ಪ್ರಸಾದ ಸ್ವೀಕರಿಸಿದರು.
ಇನ್ನು ಸಂಸದರಾದ ಬಳಿಕ ಯದುವೀರ್ ಒಡೆಯರ್ ಅವರು ಮೊದಲ ಖಾಸಗಿ ದರ್ಬಾರ್ ನಡೆಸುತ್ತಿರುವುದು ಅತ್ಯಂತ ವಿಶೇಷವಾಗಿದೆ. ಜನರ ಜೊತೆ ಬೆರೆತು ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುವುದರ ಜೊತೆಗೆ ಸಂಪ್ರದಾಯಬದ್ಧವಾಗಿ ಬಂದಿರುವ ಆಚರಣೆಗಳನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…