ಮೈಸೂರು: ರಂಗು ರಂಗಿನ ಯುವ ದಸರೆ ಅದ್ದೂರಿಯಾಗಿ ನೆರವೇರುತ್ತಿದೆ. ಐದು ದಿನ ನಡೆಯುವ ಯುವ ದಸರೆಗೆ ಅನೇಕ ಸೆಲೆಬ್ರಿಟಿಗಳು ಬಂದು ಯುವಕರಿಗೆ ರಂಗಿನ ಜೋಸ್ ನೀಡುತ್ತಿದ್ದಾರೆ. ಅದೇ ರೀತಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಮತ್ತು ತಂಡ ಅ.10 ರಂದು ಸಂಗೀತ ಸುಧೆ ಹರಿಸಲಿದೆ. ಸದ್ಯ, ಈ ಬಗ್ಗೆ ಇಳಯರಾಜ ಅವರು ಸಂತೋಷ ಹಂಚಿಕೊಂಡಿದ್ದು, ಕನ್ನಡದಲ್ಲೀಯೆ ಮಾತನಾಡಿ ಖುಷಿ ಹೊರಹಾಕಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವಿಡಿಯೋ ಸಂದೇಶ ಮೂಲಕ ಮಾತನಾಡಿದ ಅವರು, ಎಲ್ಲರಿಗೂ ನಮಸ್ಕಾರ, ಮೈಸೂರಲ್ಲಿ ದಸರಾ ಕಾರ್ಯಕ್ರಮ ನಡೆಯುತ್ತಿದೆ. ಚಾಮುಂಡಿ ದೇವಿ ಅನುಗ್ರಹದಿಂದ ಕಾರ್ಯಕ್ರಮ ಚೆನ್ನಾಗಿ ನಡೆಯಲಿದೆ ಎಂದು ನಾನು ಭಾವಿಸುತ್ತೇನೆ. ಚಾಮುಂಡಿ ತಾಯಿಯೇ ನನ್ನನ್ನು ಮೈಸೂರಿಗೆ ದಸರಾ ಮಹೋತ್ಸವಕ್ಕೆ ಕರೆಯುತ್ತಿದ್ದಾಳೆ ಎಂದು ನಾನು ಅಂದುಕೊಂಡಿದ್ದೇನೆ. ಅಲ್ಲದೇ ತಾಯಿಯೂ ನನ್ನನ್ನು ಮಾತ್ರವಲ್ಲದೇ ನನ್ನ ತಂಡವನ್ನು ಸಹ ಕರೆಯುತ್ತಿದ್ದಾಳೆ. ಹೀಗಾಗಿ ನಿಮ್ಮನ್ನು ನಾನು ನೋಡಬೇಕು ಎನಿಸುತ್ತಿದೆ. ಆ ಕಾರಣಕ್ಕಾಗಿ ನನ್ನನ್ನು ನೀವು ನೋಡಬೇಕು ಎಂದು ಭಾವಿಸಿದ್ದಾರೆ ನೀವು ಸಹ ಕಾರ್ಯಕ್ರಮಕ್ಕೆ ಬನ್ನಿ ಎಂದು ಕನ್ನಡದಲ್ಲೇ ಮಾತನಾಡಿ ತಮ್ಮ ಖುಷಿ ಹಂಚಿಕೊಂಡಿದ್ದಾರೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಯುವ ದಸರಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದ್ದು, ಹಲವು ಚಿತ್ರರಂಗದ ಗಣ್ಯರು ಭಾಗವಹಿಸಲು ಮೈಸೂರಿಗೆ ಆಗಮಿಸುತ್ತಿದ್ದಾರೆ. ಅದೇ ರೀತಿಯಲ್ಲಿ ಅ.9 ಎ.ಆರ್.ರೆಹಮಾನ್ ನಂತರ ಅ.10 ರಂದು ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಯುವ ದಸರಾ ಸಮಾರಂಭದಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದಾರೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…