ನಮ್ಮ ಮೈಸೂರ ದಸರಾ 2024

ಯುವ ದಸರೆ: ಕನ್ನಡದಲ್ಲೇ ಮಾತನಾಡಿ ಖುಷಿ ಹಂಚಿಕೊಂಡ ಇಳಯರಾಜ

ಮೈಸೂರು: ರಂಗು ರಂಗಿನ ಯುವ ದಸರೆ ಅದ್ದೂರಿಯಾಗಿ ನೆರವೇರುತ್ತಿದೆ. ಐದು ದಿನ ನಡೆಯುವ ಯುವ ದಸರೆಗೆ ಅನೇಕ ಸೆಲೆಬ್ರಿಟಿಗಳು ಬಂದು ಯುವಕರಿಗೆ ರಂಗಿನ ಜೋಸ್‌ ನೀಡುತ್ತಿದ್ದಾರೆ. ಅದೇ ರೀತಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಮತ್ತು ತಂಡ ಅ.10 ರಂದು ಸಂಗೀತ ಸುಧೆ ಹರಿಸಲಿದೆ. ಸದ್ಯ, ಈ ಬಗ್ಗೆ ಇಳಯರಾಜ ಅವರು ಸಂತೋಷ ಹಂಚಿಕೊಂಡಿದ್ದು, ಕನ್ನಡದಲ್ಲೀಯೆ ಮಾತನಾಡಿ ಖುಷಿ ಹೊರಹಾಕಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೋ ಸಂದೇಶ ಮೂಲಕ ಮಾತನಾಡಿದ ಅವರು, ಎಲ್ಲರಿಗೂ ನಮಸ್ಕಾರ, ಮೈಸೂರಲ್ಲಿ ದಸರಾ ಕಾರ್ಯಕ್ರಮ ನಡೆಯುತ್ತಿದೆ. ಚಾಮುಂಡಿ ದೇವಿ ಅನುಗ್ರಹದಿಂದ ಕಾರ್ಯಕ್ರಮ ಚೆನ್ನಾಗಿ ನಡೆಯಲಿದೆ ಎಂದು ನಾನು ಭಾವಿಸುತ್ತೇನೆ. ಚಾಮುಂಡಿ ತಾಯಿಯೇ ನನ್ನನ್ನು ಮೈಸೂರಿಗೆ ದಸರಾ ಮಹೋತ್ಸವಕ್ಕೆ ಕರೆಯುತ್ತಿದ್ದಾಳೆ ಎಂದು ನಾನು ಅಂದುಕೊಂಡಿದ್ದೇನೆ. ಅಲ್ಲದೇ ತಾಯಿಯೂ ನನ್ನನ್ನು ಮಾತ್ರವಲ್ಲದೇ ನನ್ನ ತಂಡವನ್ನು ಸಹ ಕರೆಯುತ್ತಿದ್ದಾಳೆ. ಹೀಗಾಗಿ ನಿಮ್ಮನ್ನು ನಾನು ನೋಡಬೇಕು ಎನಿಸುತ್ತಿದೆ. ಆ ಕಾರಣಕ್ಕಾಗಿ ನನ್ನನ್ನು ನೀವು ನೋಡಬೇಕು ಎಂದು ಭಾವಿಸಿದ್ದಾರೆ ನೀವು ಸಹ ಕಾರ್ಯಕ್ರಮಕ್ಕೆ ಬನ್ನಿ ಎಂದು ಕನ್ನಡದಲ್ಲೇ ಮಾತನಾಡಿ ತಮ್ಮ ಖುಷಿ ಹಂಚಿಕೊಂಡಿದ್ದಾರೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಯುವ ದಸರಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದ್ದು, ಹಲವು ಚಿತ್ರರಂಗದ ಗಣ್ಯರು ಭಾಗವಹಿಸಲು ಮೈಸೂರಿಗೆ ಆಗಮಿಸುತ್ತಿದ್ದಾರೆ. ಅದೇ ರೀತಿಯಲ್ಲಿ ಅ.9 ಎ.ಆರ್‌.ರೆಹಮಾನ್‌ ನಂತರ ಅ.10 ರಂದು ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಯುವ ದಸರಾ ಸಮಾರಂಭದಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago