ನಮ್ಮ ಮೈಸೂರ ದಸರಾ 2024

ಯುವ ದಸರೆ: ಕನ್ನಡದಲ್ಲೇ ಮಾತನಾಡಿ ಖುಷಿ ಹಂಚಿಕೊಂಡ ಇಳಯರಾಜ

ಮೈಸೂರು: ರಂಗು ರಂಗಿನ ಯುವ ದಸರೆ ಅದ್ದೂರಿಯಾಗಿ ನೆರವೇರುತ್ತಿದೆ. ಐದು ದಿನ ನಡೆಯುವ ಯುವ ದಸರೆಗೆ ಅನೇಕ ಸೆಲೆಬ್ರಿಟಿಗಳು ಬಂದು ಯುವಕರಿಗೆ ರಂಗಿನ ಜೋಸ್‌ ನೀಡುತ್ತಿದ್ದಾರೆ. ಅದೇ ರೀತಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಮತ್ತು ತಂಡ ಅ.10 ರಂದು ಸಂಗೀತ ಸುಧೆ ಹರಿಸಲಿದೆ. ಸದ್ಯ, ಈ ಬಗ್ಗೆ ಇಳಯರಾಜ ಅವರು ಸಂತೋಷ ಹಂಚಿಕೊಂಡಿದ್ದು, ಕನ್ನಡದಲ್ಲೀಯೆ ಮಾತನಾಡಿ ಖುಷಿ ಹೊರಹಾಕಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೋ ಸಂದೇಶ ಮೂಲಕ ಮಾತನಾಡಿದ ಅವರು, ಎಲ್ಲರಿಗೂ ನಮಸ್ಕಾರ, ಮೈಸೂರಲ್ಲಿ ದಸರಾ ಕಾರ್ಯಕ್ರಮ ನಡೆಯುತ್ತಿದೆ. ಚಾಮುಂಡಿ ದೇವಿ ಅನುಗ್ರಹದಿಂದ ಕಾರ್ಯಕ್ರಮ ಚೆನ್ನಾಗಿ ನಡೆಯಲಿದೆ ಎಂದು ನಾನು ಭಾವಿಸುತ್ತೇನೆ. ಚಾಮುಂಡಿ ತಾಯಿಯೇ ನನ್ನನ್ನು ಮೈಸೂರಿಗೆ ದಸರಾ ಮಹೋತ್ಸವಕ್ಕೆ ಕರೆಯುತ್ತಿದ್ದಾಳೆ ಎಂದು ನಾನು ಅಂದುಕೊಂಡಿದ್ದೇನೆ. ಅಲ್ಲದೇ ತಾಯಿಯೂ ನನ್ನನ್ನು ಮಾತ್ರವಲ್ಲದೇ ನನ್ನ ತಂಡವನ್ನು ಸಹ ಕರೆಯುತ್ತಿದ್ದಾಳೆ. ಹೀಗಾಗಿ ನಿಮ್ಮನ್ನು ನಾನು ನೋಡಬೇಕು ಎನಿಸುತ್ತಿದೆ. ಆ ಕಾರಣಕ್ಕಾಗಿ ನನ್ನನ್ನು ನೀವು ನೋಡಬೇಕು ಎಂದು ಭಾವಿಸಿದ್ದಾರೆ ನೀವು ಸಹ ಕಾರ್ಯಕ್ರಮಕ್ಕೆ ಬನ್ನಿ ಎಂದು ಕನ್ನಡದಲ್ಲೇ ಮಾತನಾಡಿ ತಮ್ಮ ಖುಷಿ ಹಂಚಿಕೊಂಡಿದ್ದಾರೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಯುವ ದಸರಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದ್ದು, ಹಲವು ಚಿತ್ರರಂಗದ ಗಣ್ಯರು ಭಾಗವಹಿಸಲು ಮೈಸೂರಿಗೆ ಆಗಮಿಸುತ್ತಿದ್ದಾರೆ. ಅದೇ ರೀತಿಯಲ್ಲಿ ಅ.9 ಎ.ಆರ್‌.ರೆಹಮಾನ್‌ ನಂತರ ಅ.10 ರಂದು ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಯುವ ದಸರಾ ಸಮಾರಂಭದಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

3 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

4 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

4 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

7 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

8 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

8 hours ago