ನಮ್ಮ ಮೈಸೂರ ದಸರಾ 2024

ಯುವ ಜನರ ಹುಚ್ಚೆಬ್ಬಿಸಿ ಕುಣಿಸಿದ ಯುವ ದಸರಾ: ಮೈ ಜುಮ್‌ ಎನಿಸಿದ ಹಾಡು-ನೃತ್ಯ

ಯಶಸ್ವಿಗೊಂಡ 2ನೇ ದಿನದ ಯುವ ದಸರಾ…

ಮೈ ಜುಮೆನಿಸಿದ ರವಿ ಬಸ್ರೂರು ಸಂಗೀತ ಸಂಯೋಜನೆ…

ಪಡ್ಡೆ ಹುಡುಗರ ನಿದ್ದೆಗೆಡಿಸಿದ ಧ್ವನಿಯ ನವಿಲಿನ ನೃತ್ಯ..

ಮೈಸೂರು: ನಗರದ ಹೊರವಲಯ ಉತ್ತನಹಳ್ಳಿ ಬಳಿ ನಡೆಯುತ್ತಿರುವ ಯುವ ದಸರಾದ ಎರಡನೇ ದಿನವಾದ ಸೋಮವಾರ ರಾತ್ರಿಯ ವೇದಿಕೆಯಲ್ಲಿ ಹಾಡು-ನೃತ್ಯಗಳು ವಿಜೃಂಭಿಸಿ, ನೆರೆದಿದ್ದ ಯುವ ಸಮೂಹವನ್ನು ರಂಜಿಸಿದವು.

ಕನ್ನಡದ ಖ್ಯಾತ ಸಂಗೀತ ಸಂಯೋಜಕರಾದ ರವಿ ಬಸ್ರೂರು, ಬಾಲಿವುಡ್‌ ಗಾಯಕಿ ಧ್ವನಿ ಬಾನುಶಾಲಿ ಅವರ ಹಾಡುಗಳು ಯುವ ದಸರೆಗೆ ಕಿಚ್ಚು ಹಚ್ಚಿದವು.

ಮೊದಲಿಗೆ ʻಮುಜ್‌ ಸೇ ದೂರ್‌ ಕಹಾ ಜಾ….ಎಂದು ವೇದಿಕೆ ಮೇಲೆ ಬಂದ ಬಾಲಿವುಡ್‌ ಗಾಯಕಿ ಧ್ವನಿ ಬಾನುಶಾಲಿ ಅವರ ಧ್ವನಿ ಜನರ ಮನಗೆದ್ದಿತು. ಹಾಡಿನೊಂದಿಗೆ ಸೊಂಟ ಬಳಕಿಸುತ್ತಾ ಬಂದ ಅವರ ನವಿಲಿನ ನರ್ತನವು ಯುವ ಪಡ್ಡೆ ಹುಡುಗರ ನಿದ್ದೆ ಕೆಡಿಸಿತು.

ದಿಲ್ಬರ್ ದಿಲ್ಬರ್, ಹು ಅಂಟವಾ ಮಾವ…., ಧಮ್‌ ಮಾರೋ ಧಮ್‌… ಮೊದಲಾದ ಗೀತೆಗಳು ಬಾಲಿವುಡ್‌ ಪ್ರಿಯರ ಮನ ತಣಿಸಿದವು.

ಸಲಾಂ ರಾಕಿ ಬಾಯ್‌, ತೂಫಾನ್ ತೂಫಾನ್‌ ಎಂದು ವೇದಿಕೆಗೆ ರಗಡ್‌ ಆಗಿ ಎಂಟ್ರಿ ಕೊಟ್ಟ ಖ್ಯಾತ ಕನ್ನಡ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರುಎರಡು ಗಂಟೆ ಕಾಲ ಕನ್ನಡದ ಜನಪ್ರಿಯ ಗೀತೆಗಳ ರಸದೌತಣ ಉಣಬಡಿಸಿದರು.

ಎದೆ ಝಲ್ ಎನಿಸುವ ʻಉಗ್ರಂ ಚಿತ್ರದ ಉಗ್ರಾಂ ವಿರಾಮ್…. ಹಾಡಿಗೆ ಯುವ ಸಮೂಹ ಕುಣಿದು ಕುಪ್ಪಳಿಸಿತು.

ಯುವ ದಸರಾ ಕಾರ್ಯಕ್ರಮ ಆರಂಭಕ್ಕೂ ಮುನ್ನ ಯುವ ಸಂಭ್ರಮ ವೇದಿಕೆಯಲ್ಲಿ ಅವಕಾಶ ಸಿಗದ ವಿವಿಧ ಕಲಾತಂಡಗಳಿಂದ ಕಾರ್ಯಕ್ರಮವನ್ನು ಆಯೋಜಿಸಲಾಗತ್ತು. ಕೆ ಆರ್ ನಗರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರಿಂದ ಸಮಾಜದಲ್ಲಿ ನಡೆಯುತ್ತಿರುವ ಅತ್ಯಾಚಾರದ, ನ್ಯಾಯ, ಆಡಳಿತದ ಕುರಿತು ನೃತ್ಯದ ಮೂಲಕ ಸಾಮಾಜಿಕ ಸಂದೇಶವನ್ನು ಸಾರಿದರು.

ಮಡಿಕೇರಿಯ ಪ್ರಥಮ ದರ್ಜೆ ಕಾಲೇಜಿನ ಕಲಾ ತಂಡವು ತುಳು ನಾಡಿನ ವಿಶೇಷ ಯಕ್ಷಗಾನ ನೃತ್ಯ, ಕೊಡಗಿನ ಡ್ಯಾನ್ಸ್, ಕಾಡಿನ ಹಾಡಿಯ ಜನರ ಕಲಾಪ್ರಕಾರ, ಹಾಗೂ ಕೊಡವ ವಿಶೇಷ ನೃತ್ಯದ ಮೂಲಕ ಸಾರ್ವಜನಿಕರ ಗಮನ ಸೆಳೆದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಒಂಟಿ ಕೊಪ್ಪಲು ವಿದ್ಯಾರ್ಥಿಗಳು ನಮ್ಮ ಮೈಸೂರು ಚಾಮರಾಜನಗರ ವಿಭಾಗದ ಪ್ರಮುಖ ಕಲೆಯಾದ ಜನಪದ ಕಲೆ ಡೊಳ್ಳು ಕುಣಿತ, ತಮಟೆ ವಾದ್ಯವನ್ನು ಭಾರಿಸುತ್ತಾ ಕರಗ, ಪೂಜಾ ಕುಣಿತ, ವೀರಗಾಸೆ ಮುಂತಾದ ಜನಪದ ಕಲೆಯನ್ನು ಪ್ರದರ್ಶಿಸಿದರು.

ಮಂಡ್ಯದ ಪಿ.ಈ.ಎಸ್ ಕಾಲೇಜಿನ ವಿದ್ಯಾರ್ಥಿಗಳು ಮಲ್ಲಗಂಬ ಕ್ರೀಡೆಯನ್ನು ಪ್ರದರ್ಶಿಸಿ ನೋಡುಗರ ಮೈ ಜಮ್ ಎನುವಂತೆ ಮಾಡಿದರು.

ಮೈಸೂರಿನ ಟೆರಿಷಿಯನ್ ಕಾಲೇಜು ವಿದ್ಯಾರ್ಥಿನಿಯರ ತಂಡವು. ದೇವರ ನಾಡು ಕೇರಳದ ಪ್ರಸಿದ್ದ ನೃತ್ಯವಾದ ಮೋಹಿನಿಯಟಂ ಪ್ರದರ್ಶನವನ್ನು ನೀಡಿದರು.ಕರುಣಾಮಯಿ ಫೌಂಡೇಶನ್ ನ ವಿಶೇಷ ಮಕ್ಕಳ ಕಲಾತಂಡವು ಕರುನಾಡಿನ ವಿಶೇಷತೆಯ ಬಗ್ಗೆ ನೃತ್ಯವನ್ನು ಮಾಡಿ ತಮ್ಮ ಮುಗ್ಧ ನಡಿಗೆಯ ಮೂಲಕ ಮನ ಮನಸೆಳೆದರು. ವಾಣಿವಿಲಾಸ ಅರಸು ಬಾಲಿಕಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ಕಂಡತಹಃ ಶ್ರೇಷ್ಠ ಆಡಳಿತಗಾರ ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ ಸಾಧನೆ, ಆಡಳಿತವನ್ನು ತಮ್ಮ ನೃತ್ಯದ ಮೂಲಕ ತಿಳಿಸುವಲ್ಲಿ ಸಫಲರಾದರು.

ಮೈಸೂರು ವಿಶ್ವಿದ್ಯಾನಿಲಯದ ಕುವೆಂಪು ಕನ್ನಡ ಸಂಸ್ಥೆಯ ವಿದ್ಯಾರ್ಥಿಗಳು ಜನಪದ ಸೊಗಡಿನ ನೃತ್ಯದ ಮೂಲಕ ರಂಜಿಸಿದರು.

ಕಿಕ್ಕಿರಿದು ಸೇರಿದ್ದ ಯುವ ಸಮೂಹ : ಕಾರ್ಯಕ್ರಮದ ಮೊದಲ ದಿನ ಸೇರಿದಂತೆಯೇ ಯುವ ದಸರಾ ಕಾರ್ಯಕ್ರಮದ ಎರಡನೇ ದಿನವೂ ಯುವ ಸಮೂಹವು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿತ್ತು ಕನ್ನಡ‌ ಹಾಗೂ ಬಾಲಿವುಡ್ ಗೀತೆಗಳಿಗೆ ಕುಣಿದು ಕುಪ್ಪಳಿಸಿ ಯುವ ದಸರಾದ ಸವಿಯನ್ನು ಸವಿದು ಕಣ್ತುಂಬಿಕೊಂಡರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

2 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

2 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

2 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

2 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

2 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

2 hours ago