ನಮ್ಮ ಮೈಸೂರ ದಸರಾ 2024

ಯುವ ಜನರ ಹುಚ್ಚೆಬ್ಬಿಸಿ ಕುಣಿಸಿದ ಯುವ ದಸರಾ: ಮೈ ಜುಮ್‌ ಎನಿಸಿದ ಹಾಡು-ನೃತ್ಯ

ಯಶಸ್ವಿಗೊಂಡ 2ನೇ ದಿನದ ಯುವ ದಸರಾ…

ಮೈ ಜುಮೆನಿಸಿದ ರವಿ ಬಸ್ರೂರು ಸಂಗೀತ ಸಂಯೋಜನೆ…

ಪಡ್ಡೆ ಹುಡುಗರ ನಿದ್ದೆಗೆಡಿಸಿದ ಧ್ವನಿಯ ನವಿಲಿನ ನೃತ್ಯ..

ಮೈಸೂರು: ನಗರದ ಹೊರವಲಯ ಉತ್ತನಹಳ್ಳಿ ಬಳಿ ನಡೆಯುತ್ತಿರುವ ಯುವ ದಸರಾದ ಎರಡನೇ ದಿನವಾದ ಸೋಮವಾರ ರಾತ್ರಿಯ ವೇದಿಕೆಯಲ್ಲಿ ಹಾಡು-ನೃತ್ಯಗಳು ವಿಜೃಂಭಿಸಿ, ನೆರೆದಿದ್ದ ಯುವ ಸಮೂಹವನ್ನು ರಂಜಿಸಿದವು.

ಕನ್ನಡದ ಖ್ಯಾತ ಸಂಗೀತ ಸಂಯೋಜಕರಾದ ರವಿ ಬಸ್ರೂರು, ಬಾಲಿವುಡ್‌ ಗಾಯಕಿ ಧ್ವನಿ ಬಾನುಶಾಲಿ ಅವರ ಹಾಡುಗಳು ಯುವ ದಸರೆಗೆ ಕಿಚ್ಚು ಹಚ್ಚಿದವು.

ಮೊದಲಿಗೆ ʻಮುಜ್‌ ಸೇ ದೂರ್‌ ಕಹಾ ಜಾ….ಎಂದು ವೇದಿಕೆ ಮೇಲೆ ಬಂದ ಬಾಲಿವುಡ್‌ ಗಾಯಕಿ ಧ್ವನಿ ಬಾನುಶಾಲಿ ಅವರ ಧ್ವನಿ ಜನರ ಮನಗೆದ್ದಿತು. ಹಾಡಿನೊಂದಿಗೆ ಸೊಂಟ ಬಳಕಿಸುತ್ತಾ ಬಂದ ಅವರ ನವಿಲಿನ ನರ್ತನವು ಯುವ ಪಡ್ಡೆ ಹುಡುಗರ ನಿದ್ದೆ ಕೆಡಿಸಿತು.

ದಿಲ್ಬರ್ ದಿಲ್ಬರ್, ಹು ಅಂಟವಾ ಮಾವ…., ಧಮ್‌ ಮಾರೋ ಧಮ್‌… ಮೊದಲಾದ ಗೀತೆಗಳು ಬಾಲಿವುಡ್‌ ಪ್ರಿಯರ ಮನ ತಣಿಸಿದವು.

ಸಲಾಂ ರಾಕಿ ಬಾಯ್‌, ತೂಫಾನ್ ತೂಫಾನ್‌ ಎಂದು ವೇದಿಕೆಗೆ ರಗಡ್‌ ಆಗಿ ಎಂಟ್ರಿ ಕೊಟ್ಟ ಖ್ಯಾತ ಕನ್ನಡ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರುಎರಡು ಗಂಟೆ ಕಾಲ ಕನ್ನಡದ ಜನಪ್ರಿಯ ಗೀತೆಗಳ ರಸದೌತಣ ಉಣಬಡಿಸಿದರು.

ಎದೆ ಝಲ್ ಎನಿಸುವ ʻಉಗ್ರಂ ಚಿತ್ರದ ಉಗ್ರಾಂ ವಿರಾಮ್…. ಹಾಡಿಗೆ ಯುವ ಸಮೂಹ ಕುಣಿದು ಕುಪ್ಪಳಿಸಿತು.

ಯುವ ದಸರಾ ಕಾರ್ಯಕ್ರಮ ಆರಂಭಕ್ಕೂ ಮುನ್ನ ಯುವ ಸಂಭ್ರಮ ವೇದಿಕೆಯಲ್ಲಿ ಅವಕಾಶ ಸಿಗದ ವಿವಿಧ ಕಲಾತಂಡಗಳಿಂದ ಕಾರ್ಯಕ್ರಮವನ್ನು ಆಯೋಜಿಸಲಾಗತ್ತು. ಕೆ ಆರ್ ನಗರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರಿಂದ ಸಮಾಜದಲ್ಲಿ ನಡೆಯುತ್ತಿರುವ ಅತ್ಯಾಚಾರದ, ನ್ಯಾಯ, ಆಡಳಿತದ ಕುರಿತು ನೃತ್ಯದ ಮೂಲಕ ಸಾಮಾಜಿಕ ಸಂದೇಶವನ್ನು ಸಾರಿದರು.

ಮಡಿಕೇರಿಯ ಪ್ರಥಮ ದರ್ಜೆ ಕಾಲೇಜಿನ ಕಲಾ ತಂಡವು ತುಳು ನಾಡಿನ ವಿಶೇಷ ಯಕ್ಷಗಾನ ನೃತ್ಯ, ಕೊಡಗಿನ ಡ್ಯಾನ್ಸ್, ಕಾಡಿನ ಹಾಡಿಯ ಜನರ ಕಲಾಪ್ರಕಾರ, ಹಾಗೂ ಕೊಡವ ವಿಶೇಷ ನೃತ್ಯದ ಮೂಲಕ ಸಾರ್ವಜನಿಕರ ಗಮನ ಸೆಳೆದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಒಂಟಿ ಕೊಪ್ಪಲು ವಿದ್ಯಾರ್ಥಿಗಳು ನಮ್ಮ ಮೈಸೂರು ಚಾಮರಾಜನಗರ ವಿಭಾಗದ ಪ್ರಮುಖ ಕಲೆಯಾದ ಜನಪದ ಕಲೆ ಡೊಳ್ಳು ಕುಣಿತ, ತಮಟೆ ವಾದ್ಯವನ್ನು ಭಾರಿಸುತ್ತಾ ಕರಗ, ಪೂಜಾ ಕುಣಿತ, ವೀರಗಾಸೆ ಮುಂತಾದ ಜನಪದ ಕಲೆಯನ್ನು ಪ್ರದರ್ಶಿಸಿದರು.

ಮಂಡ್ಯದ ಪಿ.ಈ.ಎಸ್ ಕಾಲೇಜಿನ ವಿದ್ಯಾರ್ಥಿಗಳು ಮಲ್ಲಗಂಬ ಕ್ರೀಡೆಯನ್ನು ಪ್ರದರ್ಶಿಸಿ ನೋಡುಗರ ಮೈ ಜಮ್ ಎನುವಂತೆ ಮಾಡಿದರು.

ಮೈಸೂರಿನ ಟೆರಿಷಿಯನ್ ಕಾಲೇಜು ವಿದ್ಯಾರ್ಥಿನಿಯರ ತಂಡವು. ದೇವರ ನಾಡು ಕೇರಳದ ಪ್ರಸಿದ್ದ ನೃತ್ಯವಾದ ಮೋಹಿನಿಯಟಂ ಪ್ರದರ್ಶನವನ್ನು ನೀಡಿದರು.ಕರುಣಾಮಯಿ ಫೌಂಡೇಶನ್ ನ ವಿಶೇಷ ಮಕ್ಕಳ ಕಲಾತಂಡವು ಕರುನಾಡಿನ ವಿಶೇಷತೆಯ ಬಗ್ಗೆ ನೃತ್ಯವನ್ನು ಮಾಡಿ ತಮ್ಮ ಮುಗ್ಧ ನಡಿಗೆಯ ಮೂಲಕ ಮನ ಮನಸೆಳೆದರು. ವಾಣಿವಿಲಾಸ ಅರಸು ಬಾಲಿಕಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ಕಂಡತಹಃ ಶ್ರೇಷ್ಠ ಆಡಳಿತಗಾರ ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ ಸಾಧನೆ, ಆಡಳಿತವನ್ನು ತಮ್ಮ ನೃತ್ಯದ ಮೂಲಕ ತಿಳಿಸುವಲ್ಲಿ ಸಫಲರಾದರು.

ಮೈಸೂರು ವಿಶ್ವಿದ್ಯಾನಿಲಯದ ಕುವೆಂಪು ಕನ್ನಡ ಸಂಸ್ಥೆಯ ವಿದ್ಯಾರ್ಥಿಗಳು ಜನಪದ ಸೊಗಡಿನ ನೃತ್ಯದ ಮೂಲಕ ರಂಜಿಸಿದರು.

ಕಿಕ್ಕಿರಿದು ಸೇರಿದ್ದ ಯುವ ಸಮೂಹ : ಕಾರ್ಯಕ್ರಮದ ಮೊದಲ ದಿನ ಸೇರಿದಂತೆಯೇ ಯುವ ದಸರಾ ಕಾರ್ಯಕ್ರಮದ ಎರಡನೇ ದಿನವೂ ಯುವ ಸಮೂಹವು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿತ್ತು ಕನ್ನಡ‌ ಹಾಗೂ ಬಾಲಿವುಡ್ ಗೀತೆಗಳಿಗೆ ಕುಣಿದು ಕುಪ್ಪಳಿಸಿ ಯುವ ದಸರಾದ ಸವಿಯನ್ನು ಸವಿದು ಕಣ್ತುಂಬಿಕೊಂಡರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

12 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

12 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

14 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

14 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

14 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

15 hours ago