ನಮ್ಮ ಮೈಸೂರ ದಸರಾ 2025

ಯುವ ದಸರೆಗೆ ವರ್ಣರಂಜಿತ ಚಾಲನೆ : ಮೋಡಿ ಮಾಡಿದ ಅರ್ಜುನ್‌ ಜನ್ಯ ಸಂಗೀತ

ಮೈಸೂರು : ಹೊರವಲಯದ ಉತ್ತನಹಳ್ಳಿಯ ಬಳಿ ನಡೆಯುತ್ತಿರುವ ʻಯುವ ದಸರಾʼದ ಮೊದಲ ದಿನವಾದ ಭಾನುವಾರ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಹಾಡುಗಳು ಪ್ರೇಕ್ಷಕರನ್ನು ಮೋಡಿ ಮಾಡಿದವು. ಸೊಂಪಾದ ಆಲಾಪ, ಹುಚ್ಚೆದ್ದು ಕುಣಿಸುವ ಹಾಡುಗಳ ಮಿಶ್ರಣವು ಪ್ರೇಕ್ಷಕರಿಗೆ ಮುದ ನೀಡಿದೆ.

ಇದನ್ನು ಓದಿ : Mysuru dasara | ಅರಮನೆಯಲ್ಲಿ ಥೈಕ್ಕುಡಂ ಬ್ರಿಡ್ಜ್‌ ಸಂಗೀತದ ಹೊಳೆ

ವೇದಿಕೆ ಮೇಲೆ ನೃತ್ಯಗಾರ್ತಿಯರು ನೃತ್ಯ ಪ್ರದರ್ಶಿಸುತ್ತಿದ್ದಂತೆ ಆಕಾಶದಲ್ಲಿ ಬಾಣಬಿರುಸುಗಳನ್ಬು ಸಿಡಿಸುತ್ತಿದ್ದಂತೆ ಅರ್ಜುನ್ ಜನ್ಯ ಎಂಟ್ರಿಕೊಟ್ಟರು. ಬಳಿಕ ಕನ್ನಡ ಚಿತ್ರರಂಗಕ್ಕೆ ಮೈಸೂರಿನ ಕೊಡುಗೆ ಅಪಾರ ಎನ್ನುತ್ತಲೇ ಮಾತು ಶುರುಮಾಡಿದ ಅರ್ಜುನ್ಯ ಜಗವೇ ನೀನು ಗೆಳತಿಯೇ ನನ್ನ ಜೀವದ ಒಡತಿಯೇ… ಊಸಿರೇ ನೀನು ಗೆಳತಿಯೇ…. ಹಾಡನ್ನು ಹಾಡುತ್ತಿದ್ದಂತೆ ಎದುರುಗಡೆ ಇದ್ದ ಸಹಸ್ರಾರು ಜನರು ದನಿಗೂಡಿಸಿದರು. ಬಳಿಕ ಒಂದೂವರೆ ಗಂಟೆಗಳ ಕಾಲ ತಮ್ಮದೇ ಸಂಗೀತ ರಚನೆಯ ಹಾಡುಗಳನ್ನು ಹಾಡಿ ಮೋಡಿ ಮಾಡಿದರು.

ನಂತರ, ಗಾಯಕ ಸುನೀಲ್- ನೀ ನಗೊವರೆಗೂ ನಿನ್ನೆ ಮೊನ್ನೆವರೆಗೂ ಸೊನ್ನೆಯಾಗಿದ್ದೇನಾ, ನಿನ್ನ ಕಂಡು ಮರೆತೆ ನನ್ನ ನಾ… ಮೈಸೂರಿನ ಪ್ರತಿಭೆ ಗಾಯಕರಾದ ಇಂದು ನಾಗರಾಜ್ ಅವರು ಅರಳದ ಮಲ್ಲಿಗೆ ಬಾಡಿತೆ ಮೆಲ್ಲಗೆ ಅಳುತಿದೆ ತುಸು ಮೆಲ್ಲಗೆ ಹಾಡನ್ನು ಹಾಡಿದರೆ, ಮತ್ತೊಬ್ಬ ಗಾಯಕಿ ಐಶ್ವರ್ಯ ರಂಗರಾಜನ್ ಹೂವಿನ ಬಾಣದಂತೆ ಯಾರಿಗೂ ಕಾಣದಂತೆ ಹಾಡು ಹೇಳುವ ಮೂಲಕ ಕುಣಿಯುವಂತೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago