ನಮ್ಮ ಮೈಸೂರ ದಸರಾ 2025

ಯುವ ದಸರೆಗೆ ವರ್ಣರಂಜಿತ ಚಾಲನೆ : ಮೋಡಿ ಮಾಡಿದ ಅರ್ಜುನ್‌ ಜನ್ಯ ಸಂಗೀತ

ಮೈಸೂರು : ಹೊರವಲಯದ ಉತ್ತನಹಳ್ಳಿಯ ಬಳಿ ನಡೆಯುತ್ತಿರುವ ʻಯುವ ದಸರಾʼದ ಮೊದಲ ದಿನವಾದ ಭಾನುವಾರ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಹಾಡುಗಳು ಪ್ರೇಕ್ಷಕರನ್ನು ಮೋಡಿ ಮಾಡಿದವು. ಸೊಂಪಾದ ಆಲಾಪ, ಹುಚ್ಚೆದ್ದು ಕುಣಿಸುವ ಹಾಡುಗಳ ಮಿಶ್ರಣವು ಪ್ರೇಕ್ಷಕರಿಗೆ ಮುದ ನೀಡಿದೆ.

ಇದನ್ನು ಓದಿ : Mysuru dasara | ಅರಮನೆಯಲ್ಲಿ ಥೈಕ್ಕುಡಂ ಬ್ರಿಡ್ಜ್‌ ಸಂಗೀತದ ಹೊಳೆ

ವೇದಿಕೆ ಮೇಲೆ ನೃತ್ಯಗಾರ್ತಿಯರು ನೃತ್ಯ ಪ್ರದರ್ಶಿಸುತ್ತಿದ್ದಂತೆ ಆಕಾಶದಲ್ಲಿ ಬಾಣಬಿರುಸುಗಳನ್ಬು ಸಿಡಿಸುತ್ತಿದ್ದಂತೆ ಅರ್ಜುನ್ ಜನ್ಯ ಎಂಟ್ರಿಕೊಟ್ಟರು. ಬಳಿಕ ಕನ್ನಡ ಚಿತ್ರರಂಗಕ್ಕೆ ಮೈಸೂರಿನ ಕೊಡುಗೆ ಅಪಾರ ಎನ್ನುತ್ತಲೇ ಮಾತು ಶುರುಮಾಡಿದ ಅರ್ಜುನ್ಯ ಜಗವೇ ನೀನು ಗೆಳತಿಯೇ ನನ್ನ ಜೀವದ ಒಡತಿಯೇ… ಊಸಿರೇ ನೀನು ಗೆಳತಿಯೇ…. ಹಾಡನ್ನು ಹಾಡುತ್ತಿದ್ದಂತೆ ಎದುರುಗಡೆ ಇದ್ದ ಸಹಸ್ರಾರು ಜನರು ದನಿಗೂಡಿಸಿದರು. ಬಳಿಕ ಒಂದೂವರೆ ಗಂಟೆಗಳ ಕಾಲ ತಮ್ಮದೇ ಸಂಗೀತ ರಚನೆಯ ಹಾಡುಗಳನ್ನು ಹಾಡಿ ಮೋಡಿ ಮಾಡಿದರು.

ನಂತರ, ಗಾಯಕ ಸುನೀಲ್- ನೀ ನಗೊವರೆಗೂ ನಿನ್ನೆ ಮೊನ್ನೆವರೆಗೂ ಸೊನ್ನೆಯಾಗಿದ್ದೇನಾ, ನಿನ್ನ ಕಂಡು ಮರೆತೆ ನನ್ನ ನಾ… ಮೈಸೂರಿನ ಪ್ರತಿಭೆ ಗಾಯಕರಾದ ಇಂದು ನಾಗರಾಜ್ ಅವರು ಅರಳದ ಮಲ್ಲಿಗೆ ಬಾಡಿತೆ ಮೆಲ್ಲಗೆ ಅಳುತಿದೆ ತುಸು ಮೆಲ್ಲಗೆ ಹಾಡನ್ನು ಹಾಡಿದರೆ, ಮತ್ತೊಬ್ಬ ಗಾಯಕಿ ಐಶ್ವರ್ಯ ರಂಗರಾಜನ್ ಹೂವಿನ ಬಾಣದಂತೆ ಯಾರಿಗೂ ಕಾಣದಂತೆ ಹಾಡು ಹೇಳುವ ಮೂಲಕ ಕುಣಿಯುವಂತೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago