ನಮ್ಮ ಮೈಸೂರ ದಸರಾ 2025

ಯುವ ದಸರೆಗೆ ವರ್ಣರಂಜಿತ ಚಾಲನೆ : ಮೋಡಿ ಮಾಡಿದ ಅರ್ಜುನ್‌ ಜನ್ಯ ಸಂಗೀತ

ಮೈಸೂರು : ಹೊರವಲಯದ ಉತ್ತನಹಳ್ಳಿಯ ಬಳಿ ನಡೆಯುತ್ತಿರುವ ʻಯುವ ದಸರಾʼದ ಮೊದಲ ದಿನವಾದ ಭಾನುವಾರ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಹಾಡುಗಳು ಪ್ರೇಕ್ಷಕರನ್ನು ಮೋಡಿ ಮಾಡಿದವು. ಸೊಂಪಾದ ಆಲಾಪ, ಹುಚ್ಚೆದ್ದು ಕುಣಿಸುವ ಹಾಡುಗಳ ಮಿಶ್ರಣವು ಪ್ರೇಕ್ಷಕರಿಗೆ ಮುದ ನೀಡಿದೆ.

ಇದನ್ನು ಓದಿ : Mysuru dasara | ಅರಮನೆಯಲ್ಲಿ ಥೈಕ್ಕುಡಂ ಬ್ರಿಡ್ಜ್‌ ಸಂಗೀತದ ಹೊಳೆ

ವೇದಿಕೆ ಮೇಲೆ ನೃತ್ಯಗಾರ್ತಿಯರು ನೃತ್ಯ ಪ್ರದರ್ಶಿಸುತ್ತಿದ್ದಂತೆ ಆಕಾಶದಲ್ಲಿ ಬಾಣಬಿರುಸುಗಳನ್ಬು ಸಿಡಿಸುತ್ತಿದ್ದಂತೆ ಅರ್ಜುನ್ ಜನ್ಯ ಎಂಟ್ರಿಕೊಟ್ಟರು. ಬಳಿಕ ಕನ್ನಡ ಚಿತ್ರರಂಗಕ್ಕೆ ಮೈಸೂರಿನ ಕೊಡುಗೆ ಅಪಾರ ಎನ್ನುತ್ತಲೇ ಮಾತು ಶುರುಮಾಡಿದ ಅರ್ಜುನ್ಯ ಜಗವೇ ನೀನು ಗೆಳತಿಯೇ ನನ್ನ ಜೀವದ ಒಡತಿಯೇ… ಊಸಿರೇ ನೀನು ಗೆಳತಿಯೇ…. ಹಾಡನ್ನು ಹಾಡುತ್ತಿದ್ದಂತೆ ಎದುರುಗಡೆ ಇದ್ದ ಸಹಸ್ರಾರು ಜನರು ದನಿಗೂಡಿಸಿದರು. ಬಳಿಕ ಒಂದೂವರೆ ಗಂಟೆಗಳ ಕಾಲ ತಮ್ಮದೇ ಸಂಗೀತ ರಚನೆಯ ಹಾಡುಗಳನ್ನು ಹಾಡಿ ಮೋಡಿ ಮಾಡಿದರು.

ನಂತರ, ಗಾಯಕ ಸುನೀಲ್- ನೀ ನಗೊವರೆಗೂ ನಿನ್ನೆ ಮೊನ್ನೆವರೆಗೂ ಸೊನ್ನೆಯಾಗಿದ್ದೇನಾ, ನಿನ್ನ ಕಂಡು ಮರೆತೆ ನನ್ನ ನಾ… ಮೈಸೂರಿನ ಪ್ರತಿಭೆ ಗಾಯಕರಾದ ಇಂದು ನಾಗರಾಜ್ ಅವರು ಅರಳದ ಮಲ್ಲಿಗೆ ಬಾಡಿತೆ ಮೆಲ್ಲಗೆ ಅಳುತಿದೆ ತುಸು ಮೆಲ್ಲಗೆ ಹಾಡನ್ನು ಹಾಡಿದರೆ, ಮತ್ತೊಬ್ಬ ಗಾಯಕಿ ಐಶ್ವರ್ಯ ರಂಗರಾಜನ್ ಹೂವಿನ ಬಾಣದಂತೆ ಯಾರಿಗೂ ಕಾಣದಂತೆ ಹಾಡು ಹೇಳುವ ಮೂಲಕ ಕುಣಿಯುವಂತೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

21 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

3 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

20 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

20 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

23 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

1 day ago