ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಹೀಗಿದೆ.
ಈ ದಿನ ದಸರಾ ಮಹೋತ್ಸವವನ್ನು ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡಿದ್ದಾರೆ. ನಾವು ಎಲ್ಲರೊಂದಿಗೆ ಪರಸ್ಪರ ಪ್ರೀತಿಯಿಂದ ಇರಬೇಕು. ಪರಸ್ಪರ ದ್ವೇಷದಿಂದ ಇರಬಾರದು. ಅದು ಮನುಷ್ಯತ್ವದ ಲಕ್ಷಣವಲ್ಲ ಎಂದರು.
ಎಲ್ಲರೂ ಇತಿಹಾಸ ತಿಳಿದುಕೊಳ್ಳಬೇಕು. ಎಲ್ಲರೂ ಸಂವಿಧಾನದ ಮಹತ್ವ ತಿಳಿದುಕೊಳ್ಳಬೇಕು. ಯಾರೂ ಕೂಡ ರಾಜಕೀಯ ಮಾಡಬಾರದು. ರಾಜಕೀಯ ಮಾಡುವುದಾದರೂ ಚುನಾವಣೆ ಸಂದರ್ಭದಲ್ಲಿ ಮಾಡಬೇಕು. ಯಾರನ್ನೋ ಓಲೈಕೆಗೋಸ್ಕರ ರಾಜಕಾರಣ ಮಾಡಬಾರದು. ಓಲೈಕೆ ರಾಜಕಾರಣದಿಂದ ನಷ್ಟವೇ ಜಾಸ್ತಿ ಎಂದು ಅಸಮಾಧಾನ ಹೊರಹಾಕಿದರು.
ಲೇಖಕಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವ ಮೂಲಕ ಕನ್ನಡ ನಾಡಿಗೆ ಗೌರವ ತಂದುಕೊಟ್ಟಂತಾಗಿದೆ ಎಂದು ಬಾನು ಮುಷ್ತಾಕ್ ಅವರನ್ನು ಹಾಡಿ ಹೊಗಳಿದರು.
ಈ ಬಾರಿ ದಸರಾ ಮಹೋತ್ಸವ 11 ದಿನಗಳ ಕಾಲ ನಡೆಯುತ್ತದೆ. ಈ ಬಾರಿ ವಿಶೇಷವಾಗಿ ದಸರಾ ನಡೆಯಲಿದೆ. ಶಾಸ್ತ್ರೋಕ್ತವಾಗಿಯೇ ನಾವು ದಸರಾ ಮಾಡುತ್ತಿದ್ದೇವೆ. ಈ ಬಾರಿ ಜಂಬೂಸವಾರಿಯಲ್ಲಿ ವಿಶೇಷ ಮೆರುಗು ನೀಡುವ ಕೆಲಸ ಮಾಡುತ್ತಿದ್ದೇವೆ.
ತಾರತಮ್ಯ, ಅಸಮಾನತೆ ಹೋಗಲಾಡಿಸಲೆಂದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಎಲ್ಲಾ ಪಕ್ಷದವರೂ ಗ್ಯಾರಂಟಿ ಯೋಜನೆಗಳನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ತಾರತಮ್ಯ, ಅಸಮಾನತೆಯನ್ನು ಹೋಗಲಾಡಿಸಬೇಕು ಎಂದು ಕರೆ ನೀಡಿದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…