ನಮ್ಮ ಮೈಸೂರ ದಸರಾ 2025

ಓಲೈಕೆ ರಾಜಕಾರಣದಿಂದ ಲಾಭಕ್ಕಿಂತ ನಷ್ಟವೇ ಜಾಸ್ತಿ: ಸಿಎಂ ಸಿದ್ದರಾಮಯ್ಯ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಹೀಗಿದೆ.

ಈ ದಿನ ದಸರಾ ಮಹೋತ್ಸವವನ್ನು ಬಾನು ಮುಷ್ತಾಕ್‌ ಅವರು ಉದ್ಘಾಟನೆ ಮಾಡಿದ್ದಾರೆ. ನಾವು ಎಲ್ಲರೊಂದಿಗೆ ಪರಸ್ಪರ ಪ್ರೀತಿಯಿಂದ ಇರಬೇಕು. ಪರಸ್ಪರ ದ್ವೇಷದಿಂದ ಇರಬಾರದು. ಅದು ಮನುಷ್ಯತ್ವದ ಲಕ್ಷಣವಲ್ಲ ಎಂದರು.

ಎಲ್ಲರೂ ಇತಿಹಾಸ ತಿಳಿದುಕೊಳ್ಳಬೇಕು. ಎಲ್ಲರೂ ಸಂವಿಧಾನದ ಮಹತ್ವ ತಿಳಿದುಕೊಳ್ಳಬೇಕು. ಯಾರೂ ಕೂಡ ರಾಜಕೀಯ ಮಾಡಬಾರದು. ರಾಜಕೀಯ ಮಾಡುವುದಾದರೂ ಚುನಾವಣೆ ಸಂದರ್ಭದಲ್ಲಿ ಮಾಡಬೇಕು. ಯಾರನ್ನೋ ಓಲೈಕೆಗೋಸ್ಕರ ರಾಜಕಾರಣ ಮಾಡಬಾರದು. ಓಲೈಕೆ ರಾಜಕಾರಣದಿಂದ ನಷ್ಟವೇ ಜಾಸ್ತಿ ಎಂದು ಅಸಮಾಧಾನ ಹೊರಹಾಕಿದರು.

ಲೇಖಕಿ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಮಾಡುವ ಮೂಲಕ ಕನ್ನಡ ನಾಡಿಗೆ ಗೌರವ ತಂದುಕೊಟ್ಟಂತಾಗಿದೆ ಎಂದು ಬಾನು ಮುಷ್ತಾಕ್‌ ಅವರನ್ನು ಹಾಡಿ ಹೊಗಳಿದರು.

ಈ ಬಾರಿ ದಸರಾ ಮಹೋತ್ಸವ 11 ದಿನಗಳ ಕಾಲ ನಡೆಯುತ್ತದೆ. ಈ ಬಾರಿ ವಿಶೇಷವಾಗಿ ದಸರಾ ನಡೆಯಲಿದೆ. ಶಾಸ್ತ್ರೋಕ್ತವಾಗಿಯೇ ನಾವು ದಸರಾ ಮಾಡುತ್ತಿದ್ದೇವೆ. ಈ ಬಾರಿ ಜಂಬೂಸವಾರಿಯಲ್ಲಿ ವಿಶೇಷ ಮೆರುಗು ನೀಡುವ ಕೆಲಸ ಮಾಡುತ್ತಿದ್ದೇವೆ.

ತಾರತಮ್ಯ, ಅಸಮಾನತೆ ಹೋಗಲಾಡಿಸಲೆಂದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಎಲ್ಲಾ ಪಕ್ಷದವರೂ ಗ್ಯಾರಂಟಿ ಯೋಜನೆಗಳನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ತಾರತಮ್ಯ, ಅಸಮಾನತೆಯನ್ನು ಹೋಗಲಾಡಿಸಬೇಕು ಎಂದು ಕರೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

6 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

7 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

8 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

8 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

8 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

9 hours ago