ನಮ್ಮ ಮೈಸೂರ ದಸರಾ 2025

ಓಲೈಕೆ ರಾಜಕಾರಣದಿಂದ ಲಾಭಕ್ಕಿಂತ ನಷ್ಟವೇ ಜಾಸ್ತಿ: ಸಿಎಂ ಸಿದ್ದರಾಮಯ್ಯ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಹೀಗಿದೆ.

ಈ ದಿನ ದಸರಾ ಮಹೋತ್ಸವವನ್ನು ಬಾನು ಮುಷ್ತಾಕ್‌ ಅವರು ಉದ್ಘಾಟನೆ ಮಾಡಿದ್ದಾರೆ. ನಾವು ಎಲ್ಲರೊಂದಿಗೆ ಪರಸ್ಪರ ಪ್ರೀತಿಯಿಂದ ಇರಬೇಕು. ಪರಸ್ಪರ ದ್ವೇಷದಿಂದ ಇರಬಾರದು. ಅದು ಮನುಷ್ಯತ್ವದ ಲಕ್ಷಣವಲ್ಲ ಎಂದರು.

ಎಲ್ಲರೂ ಇತಿಹಾಸ ತಿಳಿದುಕೊಳ್ಳಬೇಕು. ಎಲ್ಲರೂ ಸಂವಿಧಾನದ ಮಹತ್ವ ತಿಳಿದುಕೊಳ್ಳಬೇಕು. ಯಾರೂ ಕೂಡ ರಾಜಕೀಯ ಮಾಡಬಾರದು. ರಾಜಕೀಯ ಮಾಡುವುದಾದರೂ ಚುನಾವಣೆ ಸಂದರ್ಭದಲ್ಲಿ ಮಾಡಬೇಕು. ಯಾರನ್ನೋ ಓಲೈಕೆಗೋಸ್ಕರ ರಾಜಕಾರಣ ಮಾಡಬಾರದು. ಓಲೈಕೆ ರಾಜಕಾರಣದಿಂದ ನಷ್ಟವೇ ಜಾಸ್ತಿ ಎಂದು ಅಸಮಾಧಾನ ಹೊರಹಾಕಿದರು.

ಲೇಖಕಿ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಮಾಡುವ ಮೂಲಕ ಕನ್ನಡ ನಾಡಿಗೆ ಗೌರವ ತಂದುಕೊಟ್ಟಂತಾಗಿದೆ ಎಂದು ಬಾನು ಮುಷ್ತಾಕ್‌ ಅವರನ್ನು ಹಾಡಿ ಹೊಗಳಿದರು.

ಈ ಬಾರಿ ದಸರಾ ಮಹೋತ್ಸವ 11 ದಿನಗಳ ಕಾಲ ನಡೆಯುತ್ತದೆ. ಈ ಬಾರಿ ವಿಶೇಷವಾಗಿ ದಸರಾ ನಡೆಯಲಿದೆ. ಶಾಸ್ತ್ರೋಕ್ತವಾಗಿಯೇ ನಾವು ದಸರಾ ಮಾಡುತ್ತಿದ್ದೇವೆ. ಈ ಬಾರಿ ಜಂಬೂಸವಾರಿಯಲ್ಲಿ ವಿಶೇಷ ಮೆರುಗು ನೀಡುವ ಕೆಲಸ ಮಾಡುತ್ತಿದ್ದೇವೆ.

ತಾರತಮ್ಯ, ಅಸಮಾನತೆ ಹೋಗಲಾಡಿಸಲೆಂದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಎಲ್ಲಾ ಪಕ್ಷದವರೂ ಗ್ಯಾರಂಟಿ ಯೋಜನೆಗಳನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ತಾರತಮ್ಯ, ಅಸಮಾನತೆಯನ್ನು ಹೋಗಲಾಡಿಸಬೇಕು ಎಂದು ಕರೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

2 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

18 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

18 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

21 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

23 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

23 hours ago