ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಹೀಗಿದೆ.
ಈ ದಿನ ದಸರಾ ಮಹೋತ್ಸವವನ್ನು ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡಿದ್ದಾರೆ. ನಾವು ಎಲ್ಲರೊಂದಿಗೆ ಪರಸ್ಪರ ಪ್ರೀತಿಯಿಂದ ಇರಬೇಕು. ಪರಸ್ಪರ ದ್ವೇಷದಿಂದ ಇರಬಾರದು. ಅದು ಮನುಷ್ಯತ್ವದ ಲಕ್ಷಣವಲ್ಲ ಎಂದರು.
ಎಲ್ಲರೂ ಇತಿಹಾಸ ತಿಳಿದುಕೊಳ್ಳಬೇಕು. ಎಲ್ಲರೂ ಸಂವಿಧಾನದ ಮಹತ್ವ ತಿಳಿದುಕೊಳ್ಳಬೇಕು. ಯಾರೂ ಕೂಡ ರಾಜಕೀಯ ಮಾಡಬಾರದು. ರಾಜಕೀಯ ಮಾಡುವುದಾದರೂ ಚುನಾವಣೆ ಸಂದರ್ಭದಲ್ಲಿ ಮಾಡಬೇಕು. ಯಾರನ್ನೋ ಓಲೈಕೆಗೋಸ್ಕರ ರಾಜಕಾರಣ ಮಾಡಬಾರದು. ಓಲೈಕೆ ರಾಜಕಾರಣದಿಂದ ನಷ್ಟವೇ ಜಾಸ್ತಿ ಎಂದು ಅಸಮಾಧಾನ ಹೊರಹಾಕಿದರು.
ಲೇಖಕಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವ ಮೂಲಕ ಕನ್ನಡ ನಾಡಿಗೆ ಗೌರವ ತಂದುಕೊಟ್ಟಂತಾಗಿದೆ ಎಂದು ಬಾನು ಮುಷ್ತಾಕ್ ಅವರನ್ನು ಹಾಡಿ ಹೊಗಳಿದರು.
ಈ ಬಾರಿ ದಸರಾ ಮಹೋತ್ಸವ 11 ದಿನಗಳ ಕಾಲ ನಡೆಯುತ್ತದೆ. ಈ ಬಾರಿ ವಿಶೇಷವಾಗಿ ದಸರಾ ನಡೆಯಲಿದೆ. ಶಾಸ್ತ್ರೋಕ್ತವಾಗಿಯೇ ನಾವು ದಸರಾ ಮಾಡುತ್ತಿದ್ದೇವೆ. ಈ ಬಾರಿ ಜಂಬೂಸವಾರಿಯಲ್ಲಿ ವಿಶೇಷ ಮೆರುಗು ನೀಡುವ ಕೆಲಸ ಮಾಡುತ್ತಿದ್ದೇವೆ.
ತಾರತಮ್ಯ, ಅಸಮಾನತೆ ಹೋಗಲಾಡಿಸಲೆಂದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಎಲ್ಲಾ ಪಕ್ಷದವರೂ ಗ್ಯಾರಂಟಿ ಯೋಜನೆಗಳನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ತಾರತಮ್ಯ, ಅಸಮಾನತೆಯನ್ನು ಹೋಗಲಾಡಿಸಬೇಕು ಎಂದು ಕರೆ ನೀಡಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…