ನಮ್ಮ ಮೈಸೂರ ದಸರಾ 2025

ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನಾ ವೇದಿಕೆಯಲ್ಲಿ ಮಾತನಾಡಿದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು, ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ.

ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ 45 ವರ್ಷ ಪೂರೈಸಿದ್ದಾರೆ. ಇದು ಮೈಸೂರಿನ ಜನರಿಗೆ ಹೆಮ್ಮೆಯ ವಿಷಯ ಎಂದರು.

ಇನ್ನು ಬೂಕರ್‌ ಪ್ರಶಸ್ತಿ ಪಡೆದ ಬಾನು ಮುಷ್ತಾಕ್‌ ದೊಡ್ಡ ಸಾಧನೆ ಮಾಡಿದ್ದಾರೆ. ಒಬ್ಬ ಕನ್ನಡತಿಯಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅವರು ದಸರಾ ಉದ್ಘಾಟನೆ ಮಾಡಿರೋದು ನಮ್ಮೆಲ್ಲರಿಗೂ ಸಂತಸ ತಂದಿದೆ ಎಂದು ಹೇಳಿದರು.

ಇನ್ನು ಈ ದೇಶದಲ್ಲಿ ಬರೀ ಜಾತಿ ಜಾತಿ, ಅಧರ್ಮ, ಅನೀತಿಗಳನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ನಾವೆಲ್ಲರೂ ಧರ್ಮದ ಪರ ನಿಲ್ಲಬೇಕು. ಚಾಮುಂಡೇಶ್ವರಿ ದೇವಿಗೆ ಬಾನು ಮುಷ್ತಾಕ್‌ ಪೂಜೆ ಮಾಡಿ ಮಂಗಳಾರತಿ ಪಡೆದಿದ್ದಾರೆ. ಎಲ್ಲರೂ ಧರ್ಮ, ಬೇಧ ಭಾವ ಮರೆತು ಬದುಕೋಣ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

7 mins ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

14 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

15 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

16 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

16 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

17 hours ago