ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆ ಮಾಡಲು ಶಿಥಿಲ ಕಟ್ಟಡಗಳ ಮೇಲೆ ಹತ್ತಬಾರದು ಎಂದು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಹಾಗೂ ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ದಸರಾ ಮಹೋತ್ಸವವನ್ನು ವ್ಯವಸ್ಥಿತವಾಗಿ ನಡೆಸಲು ಉದ್ದೇಶಿಸಲಾಗಿದೆ ಎಂದರು.
ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಸಿಎಂ, ಡಿಸಿಎಂಗೆ ವಿಶೇಷ ಉಡುಗೊರೆ ರೆಡಿ
ಈ ಬಾರಿ ಕಡ್ಡಾಯವಾಗಿ ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮಕ್ಕೆ ನಿಗದಿತ ಪಾಸ್ ಇರುವವರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಪಾಸ್ ಇಲ್ಲದವರಿಗೆ ಪ್ರವೇಶವಿಲ್ಲ. ಕಾರ್ಯಕ್ರಮಕ್ಕೆ ಬರುವವರು ನಿಗದಿತ ಸ್ಥಳದಲ್ಲೇ ತಮ್ಮ ವಾಹನಗಳನ್ನು ಪಾರ್ಕಿಂಗ್ ಮಾಡಬೇಕು ಎಂದು ಮಾಹಿತಿ ನೀಡಿದರು.
ಇನ್ನು ವಿಜಯದಶಮಿ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಅನೇಕ ಶಿಥಿಲ ಕಟ್ಟಡಗಳಿವೆ. ಅವುಗಳ ಮೇಲೆ ಹತ್ತಬಾರದು. ಆ ಕಟ್ಟಡಗಳ ಮೇಲೆ ಕುಳಿತು ಜಂಬೂಸವಾರಿ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಿದರು.
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…