ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಸಿದ್ಧತಾ ಕಾರ್ಯ ಗರಿಗೆದರಿದೆ.
ಅರಮನೆಯಲ್ಲಿ ವಿದ್ಯುತ್ ಬಲ್ಬ್ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯುತ್ ಬಲ್ಬ್ಗಳಿರುವ ಅರಮನೆಯಲ್ಲಿ ಬರ್ನ್ ಆದ ಬಲ್ಬ್ಗಳನ್ನು ತೆರವುಗೊಳಿಸಿ ಹೊಸ ಬಲ್ಬ್ಗಳನ್ನು ಅಳವಡಿಸಲಾಗುತ್ತಿದೆ.
ಇದನ್ನೂ ಓದಿ: ಹುಣಸೂರು ಹೈಟೆಕ್ ಆಸ್ಪತ್ರೆ ಶೀಘ್ರ ಜನಸೇವೆಗೆ : ಶಾಸಕ ಹರೀಶ್ಗೌಡ
ಕೆಟ್ಟು ಹೋದ ಸುಮಾರು 16 ಸಾವಿರಕ್ಕೂ ಹೆಚ್ಚು ಬಲ್ಬ್ಗಳನ್ನು ತೆರವುಗೊಳಿಸಲಾಗುತ್ತಿದ್ದು, ವೈರಿಂಗ್ ದುರಸ್ತಿ ಕಾರ್ಯ ಆರಂಭವಾಗಿದೆ.
ದೊಡ್ಡ ದೊಡ್ಡ ಕ್ರೇನ್ಗಳ ಮೂಲಕ ಮೇಲೇರಿ ದುರಸ್ತಿ ಕಾರ್ಯ ಮಾಡುತ್ತಿದ್ದು, ರಾತ್ರಿ ವೇಳೆ ಅರಮನೆ ಜಗಮಗಿಸುವಂತೆ ಮಾಡಲಾಗುತ್ತದೆ.
ದಸರಾ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಸಿದ್ದತಾ ಕೆಲಸ ಕಾರ್ಯಗಳು ತರಾತುರಿಯಲ್ಲಿ ನಡೆಯುತ್ತಿವೆ.
ಸುಮಾರು 72 ಎಕರೆ ಪ್ರದೇಶದಲ್ಲಿ ವ್ಯಾಪ್ತಿಯಲ್ಲಿರುವ ಅರಮನೆ ಆವರಣ, ಅರಮನೆ ಸುತ್ತಲೂ ಇರುವ ಕಾಂಪೌಂಡ್ ಗೋಡೆ, ಅರಮನೆ ಸೇರಿದಂತೆ ಎಲ್ಲಾ ಕಡೆ ಸುಣ್ಣ, ಬಣ್ಣ ಹೊಡೆಯುವ ಕೆಲಸವೂ ಆರಂಭವಾಗಿದ್ದು, ಮೈಸೂರು ದಸರಾಗೆ ಜಿಲ್ಲಾಡಳಿತ ಸರ್ವ ಸನ್ನದ್ಧವಾಗುತ್ತಿದೆ.
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…
ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…