ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಸಿದ್ಧತಾ ಕಾರ್ಯ ಗರಿಗೆದರಿದೆ.
ಅರಮನೆಯಲ್ಲಿ ವಿದ್ಯುತ್ ಬಲ್ಬ್ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯುತ್ ಬಲ್ಬ್ಗಳಿರುವ ಅರಮನೆಯಲ್ಲಿ ಬರ್ನ್ ಆದ ಬಲ್ಬ್ಗಳನ್ನು ತೆರವುಗೊಳಿಸಿ ಹೊಸ ಬಲ್ಬ್ಗಳನ್ನು ಅಳವಡಿಸಲಾಗುತ್ತಿದೆ.
ಇದನ್ನೂ ಓದಿ: ಹುಣಸೂರು ಹೈಟೆಕ್ ಆಸ್ಪತ್ರೆ ಶೀಘ್ರ ಜನಸೇವೆಗೆ : ಶಾಸಕ ಹರೀಶ್ಗೌಡ
ಕೆಟ್ಟು ಹೋದ ಸುಮಾರು 16 ಸಾವಿರಕ್ಕೂ ಹೆಚ್ಚು ಬಲ್ಬ್ಗಳನ್ನು ತೆರವುಗೊಳಿಸಲಾಗುತ್ತಿದ್ದು, ವೈರಿಂಗ್ ದುರಸ್ತಿ ಕಾರ್ಯ ಆರಂಭವಾಗಿದೆ.
ದೊಡ್ಡ ದೊಡ್ಡ ಕ್ರೇನ್ಗಳ ಮೂಲಕ ಮೇಲೇರಿ ದುರಸ್ತಿ ಕಾರ್ಯ ಮಾಡುತ್ತಿದ್ದು, ರಾತ್ರಿ ವೇಳೆ ಅರಮನೆ ಜಗಮಗಿಸುವಂತೆ ಮಾಡಲಾಗುತ್ತದೆ.
ದಸರಾ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಸಿದ್ದತಾ ಕೆಲಸ ಕಾರ್ಯಗಳು ತರಾತುರಿಯಲ್ಲಿ ನಡೆಯುತ್ತಿವೆ.
ಸುಮಾರು 72 ಎಕರೆ ಪ್ರದೇಶದಲ್ಲಿ ವ್ಯಾಪ್ತಿಯಲ್ಲಿರುವ ಅರಮನೆ ಆವರಣ, ಅರಮನೆ ಸುತ್ತಲೂ ಇರುವ ಕಾಂಪೌಂಡ್ ಗೋಡೆ, ಅರಮನೆ ಸೇರಿದಂತೆ ಎಲ್ಲಾ ಕಡೆ ಸುಣ್ಣ, ಬಣ್ಣ ಹೊಡೆಯುವ ಕೆಲಸವೂ ಆರಂಭವಾಗಿದ್ದು, ಮೈಸೂರು ದಸರಾಗೆ ಜಿಲ್ಲಾಡಳಿತ ಸರ್ವ ಸನ್ನದ್ಧವಾಗುತ್ತಿದೆ.
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…