ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಸಿದ್ಧತಾ ಕಾರ್ಯ ಗರಿಗೆದರಿದೆ.
ಅರಮನೆಯಲ್ಲಿ ವಿದ್ಯುತ್ ಬಲ್ಬ್ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯುತ್ ಬಲ್ಬ್ಗಳಿರುವ ಅರಮನೆಯಲ್ಲಿ ಬರ್ನ್ ಆದ ಬಲ್ಬ್ಗಳನ್ನು ತೆರವುಗೊಳಿಸಿ ಹೊಸ ಬಲ್ಬ್ಗಳನ್ನು ಅಳವಡಿಸಲಾಗುತ್ತಿದೆ.
ಇದನ್ನೂ ಓದಿ: ಹುಣಸೂರು ಹೈಟೆಕ್ ಆಸ್ಪತ್ರೆ ಶೀಘ್ರ ಜನಸೇವೆಗೆ : ಶಾಸಕ ಹರೀಶ್ಗೌಡ
ಕೆಟ್ಟು ಹೋದ ಸುಮಾರು 16 ಸಾವಿರಕ್ಕೂ ಹೆಚ್ಚು ಬಲ್ಬ್ಗಳನ್ನು ತೆರವುಗೊಳಿಸಲಾಗುತ್ತಿದ್ದು, ವೈರಿಂಗ್ ದುರಸ್ತಿ ಕಾರ್ಯ ಆರಂಭವಾಗಿದೆ.
ದೊಡ್ಡ ದೊಡ್ಡ ಕ್ರೇನ್ಗಳ ಮೂಲಕ ಮೇಲೇರಿ ದುರಸ್ತಿ ಕಾರ್ಯ ಮಾಡುತ್ತಿದ್ದು, ರಾತ್ರಿ ವೇಳೆ ಅರಮನೆ ಜಗಮಗಿಸುವಂತೆ ಮಾಡಲಾಗುತ್ತದೆ.
ದಸರಾ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಸಿದ್ದತಾ ಕೆಲಸ ಕಾರ್ಯಗಳು ತರಾತುರಿಯಲ್ಲಿ ನಡೆಯುತ್ತಿವೆ.
ಸುಮಾರು 72 ಎಕರೆ ಪ್ರದೇಶದಲ್ಲಿ ವ್ಯಾಪ್ತಿಯಲ್ಲಿರುವ ಅರಮನೆ ಆವರಣ, ಅರಮನೆ ಸುತ್ತಲೂ ಇರುವ ಕಾಂಪೌಂಡ್ ಗೋಡೆ, ಅರಮನೆ ಸೇರಿದಂತೆ ಎಲ್ಲಾ ಕಡೆ ಸುಣ್ಣ, ಬಣ್ಣ ಹೊಡೆಯುವ ಕೆಲಸವೂ ಆರಂಭವಾಗಿದ್ದು, ಮೈಸೂರು ದಸರಾಗೆ ಜಿಲ್ಲಾಡಳಿತ ಸರ್ವ ಸನ್ನದ್ಧವಾಗುತ್ತಿದೆ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…
ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್ಗೆ ಸಿಎಂ…
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…
ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…