ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ: ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಸಿದ್ಧತಾ ಕಾರ್ಯ ಗರಿಗೆದರಿದೆ.

ಅರಮನೆಯಲ್ಲಿ ವಿದ್ಯುತ್‌ ಬಲ್ಬ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯುತ್ ಬಲ್ಬ್‌ಗಳಿರುವ ಅರಮನೆಯಲ್ಲಿ ಬರ್ನ್ ಆದ ಬಲ್ಬ್‌ಗಳನ್ನು ತೆರವುಗೊಳಿಸಿ ಹೊಸ ಬಲ್ಬ್‌ಗಳನ್ನು ಅಳವಡಿಸಲಾಗುತ್ತಿದೆ.

ಇದನ್ನೂ ಓದಿ: ಹುಣಸೂರು ಹೈಟೆಕ್ ಆಸ್ಪತ್ರೆ ಶೀಘ್ರ ಜನಸೇವೆಗೆ : ಶಾಸಕ ಹರೀಶ್‌ಗೌಡ

ಕೆಟ್ಟು ಹೋದ ಸುಮಾರು 16 ಸಾವಿರಕ್ಕೂ ಹೆಚ್ಚು ಬಲ್ಬ್‌ಗಳನ್ನು ತೆರವುಗೊಳಿಸಲಾಗುತ್ತಿದ್ದು, ವೈರಿಂಗ್ ದುರಸ್ತಿ ಕಾರ್ಯ ಆರಂಭವಾಗಿದೆ.

ದೊಡ್ಡ ದೊಡ್ಡ ಕ್ರೇನ್‌ಗಳ ಮೂಲಕ ಮೇಲೇರಿ ದುರಸ್ತಿ ಕಾರ್ಯ ಮಾಡುತ್ತಿದ್ದು, ರಾತ್ರಿ ವೇಳೆ ಅರಮನೆ ಜಗಮಗಿಸುವಂತೆ ಮಾಡಲಾಗುತ್ತದೆ.

ದಸರಾ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಸಿದ್ದತಾ ಕೆಲಸ ಕಾರ್ಯಗಳು ತರಾತುರಿಯಲ್ಲಿ ನಡೆಯುತ್ತಿವೆ.

ಸುಮಾರು 72 ಎಕರೆ ಪ್ರದೇಶದಲ್ಲಿ ವ್ಯಾಪ್ತಿಯಲ್ಲಿರುವ ಅರಮನೆ ಆವರಣ, ಅರಮನೆ ಸುತ್ತಲೂ ಇರುವ ಕಾಂಪೌಂಡ್ ಗೋಡೆ, ಅರಮನೆ ಸೇರಿದಂತೆ ಎಲ್ಲಾ ಕಡೆ ಸುಣ್ಣ, ಬಣ್ಣ ಹೊಡೆಯುವ ಕೆಲಸವೂ ಆರಂಭವಾಗಿದ್ದು, ಮೈಸೂರು ದಸರಾಗೆ ಜಿಲ್ಲಾಡಳಿತ ಸರ್ವ ಸನ್ನದ್ಧವಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

17 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

17 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

17 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

17 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

17 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

17 hours ago