ನಮ್ಮ ಮೈಸೂರ ದಸರಾ 2025

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್‌ಡೌನ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್‌ಡೌನ್‌ ಶುರುವಾಗಿದೆ. ಈ ಬಾರಿ ಅಂಬಾವಿಲಾಸ ಅರಮನೆ ಆವರಣದಲ್ಲಿ 48 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.

ಇನ್ನು ಪಾಸ್‌ ಇದ್ದವರಿಗೆ ಮಾತ್ರ ಅರಮನೆ ಒಳಭಾಗ ಪೊಲೀಸ್‌ ಭದ್ರತೆ ಕೂಡ ಹೆಚ್ಚಳ ಮಾಡಲಾಗಿದೆ. ಸಿಎಂ ಸೇರಿದಂತೆ ಹಲವು ಕ್ಯಾಬಿನೆಟ್‌ ಸಚಿವರು ಕೂಡ ಜಂಬೂಸವಾರಿಯಲ್ಲಿ ಭಾಗಿಯಾಗಲಿದ್ದಾರೆ.

ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು, ರಾಜಮನೆತನದ ಕುಟುಂಬಸ್ಥರು, ನ್ಯಾಯಾಧೀಶರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ.

ಇನ್ನು ಅಂಬಾರಿ ಹೊರುವ ರಾಜಮಾರ್ಗ ಸೇರಿದಂತೆ ನಗರ ವ್ಯಾಪ್ತಿಯಲ್ಲಿ ಹೆಚ್ಚಿನ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

ಅಲ್ಲದೇ ಅಂಬಾರಿ ಸಾಗುವ ಮಾರ್ಗದುದ್ದಕ್ಕು ರಸ್ತೆ ಬದಿ ತಾತ್ಕಾಲಿಕ ತಡೆಗೋಡೆ ನಿರ್ಮಾಣ ಮಾಡಲಾಗಿದ್ದು, ಅಂಬಾರಿ ಸಾಗುವಾಗ ಜನ ದಾಟಿ ರಸ್ತೆಗೆ ಬಾರದಂತೆ ಕ್ರಮ ವಹಿಸಲಾಗಿದೆ.

ಒಟ್ಟಾರೆಯಾಗಿ ಅಂಬಾರಿ ಹೊತ್ತು ಸಾಗುವ ಅಭಿಮನ್ಯು ರಾಜಗಾಂಭೀರ್ಯದೊಂದಿಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದಕ್ಕೂ ಜನ ಕಾತುರದಿಂದ ಕಾಯುತ್ತಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

2 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

3 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

4 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

5 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

10 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

12 hours ago