ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್ಡೌನ್ ಶುರುವಾಗಿದೆ. ಈ ಬಾರಿ ಅಂಬಾವಿಲಾಸ ಅರಮನೆ ಆವರಣದಲ್ಲಿ 48 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.
ಇನ್ನು ಪಾಸ್ ಇದ್ದವರಿಗೆ ಮಾತ್ರ ಅರಮನೆ ಒಳಭಾಗ ಪೊಲೀಸ್ ಭದ್ರತೆ ಕೂಡ ಹೆಚ್ಚಳ ಮಾಡಲಾಗಿದೆ. ಸಿಎಂ ಸೇರಿದಂತೆ ಹಲವು ಕ್ಯಾಬಿನೆಟ್ ಸಚಿವರು ಕೂಡ ಜಂಬೂಸವಾರಿಯಲ್ಲಿ ಭಾಗಿಯಾಗಲಿದ್ದಾರೆ.
ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು, ರಾಜಮನೆತನದ ಕುಟುಂಬಸ್ಥರು, ನ್ಯಾಯಾಧೀಶರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ.
ಇನ್ನು ಅಂಬಾರಿ ಹೊರುವ ರಾಜಮಾರ್ಗ ಸೇರಿದಂತೆ ನಗರ ವ್ಯಾಪ್ತಿಯಲ್ಲಿ ಹೆಚ್ಚಿನ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ.
ಅಲ್ಲದೇ ಅಂಬಾರಿ ಸಾಗುವ ಮಾರ್ಗದುದ್ದಕ್ಕು ರಸ್ತೆ ಬದಿ ತಾತ್ಕಾಲಿಕ ತಡೆಗೋಡೆ ನಿರ್ಮಾಣ ಮಾಡಲಾಗಿದ್ದು, ಅಂಬಾರಿ ಸಾಗುವಾಗ ಜನ ದಾಟಿ ರಸ್ತೆಗೆ ಬಾರದಂತೆ ಕ್ರಮ ವಹಿಸಲಾಗಿದೆ.
ಒಟ್ಟಾರೆಯಾಗಿ ಅಂಬಾರಿ ಹೊತ್ತು ಸಾಗುವ ಅಭಿಮನ್ಯು ರಾಜಗಾಂಭೀರ್ಯದೊಂದಿಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದಕ್ಕೂ ಜನ ಕಾತುರದಿಂದ ಕಾಯುತ್ತಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…