ನಮ್ಮ ಮೈಸೂರ ದಸರಾ 2025

ದಸರಾ ಸಂಭ್ರಮ : ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ

ಮೈಸೂರು : ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿದ್ದು, ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರವೇರಿಸಿದ್ದಾರೆ.

ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ಬಳಿಕ 7:55ಕ್ಕೆ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ಬಳಿಕ ಆಯುಧಗಳನ್ನು ಶುಚಿಗೊಳಿಸಿ ವಾಪಸ್ ಅರಮನೆಗೆ ರವಾನಿಸಲಾಗುತ್ತದೆ. ಅರಮನೆಯ ಆನೆಬಾಗಿಲು ಮೂಲಕ ಕಲ್ಯಾಟಮಂಟಪಕ್ಕೆ ಕೊಂಡೊಯ್ದು ಜೋಡಣೆ ಮಾಡಿ, ಸಿಂಹಾಸನಕ್ಕೆ ಜೋಡಿಸಿದ್ದ ಸಿಂಹಕ್ಕೆ ಪೂಜೆ ಮಾಡಲಾಗುತ್ತದೆ. ಆ ನಂತರ ರಾಜಪುರೋಹಿತರ ಮಾರ್ಗದರ್ಶನದಂತೆ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯುಧ ಪೂಜೆ ನೆರವೇರಿಸಿದ್ದಾರೆ.

ಇದನ್ನೂ ಓದಿ:-ಬಿಜೆಪಿಯ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಕರಿಕಲ್ಲು ತೊಟ್ಟಿಯಲ್ಲಿ ಯದುವೀರರಿಂದ ಪೂಜೆ ನಡೆಯುತ್ತಿದ್ದು, ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸು, ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆ ಮಾಡಲಾಗಿದೆ.

ಇನ್ನೂ ಸಂಜೆ ಖಾಸಗಿ ದರ್ಬಾರ್ ನಡೆಯಲಿದ್ದು, ಬೆಳ್ಳಿದ್ವಾರದಿಂದ ರಾಜರು ಪ್ರವೇಶಿಸುತ್ತಾರೆ. ಈ ಸಂದರ್ಭದಲ್ಲಿ ಹಸ್ತಲಾಘವದ ಮೂಲಕ ಸಿಂಹಾಸನದ ಏಳು ಮೆಟ್ಟಿಲು ಏರುತ್ತಾರೆ. ಸಿಂಹಾಸನವೇರಿ ರಾಜರು ದರ್ಬಾರ್ ಮಾಡುತ್ತಾರೆ. ದರ್ಬಾರ್ ಬಳಿಕ ಸಂಸ್ಥಾನ ಗೀತೆಯನ್ನು ಪೊಲೀಸ್ ಬ್ಯಾಂಡ್‌ನಲ್ಲಿ ನುಡಿಸಲಾಗುತ್ತದೆ. ಸಭಾಸದರು ರಾಜರಿಗೆ ಗೌರವ ಮತ್ತು ರಕ್ಷೆ ನೀಡುತ್ತಾರೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ರವರಿಗೆ ಪರಾಕ್‌ಗಳನ್ನ ಕೂಗಲಾಗುತ್ತದೆ. ರಾಣಿಯವರು ಬಂದು ರಾಜರಿಗೆ ನಮಸ್ಕರಿಸುತ್ತಾರೆ. ಬಳಿಕ ದರ್ಬಾರ್ ಮುಗಿಸಿ ಪೂಜೆ ನಡೆಸಲಾಗುತ್ತದೆ. ಬಳಿಕ ಕಂಕಣ ವಿಸರ್ಜನೆ ಮಾಡಿದಾಗ ನವರಾತ್ರಿ ಪೂಜೆ ಸಂಪನ್ನವಾಗುತ್ತದೆ. ಈ ವೇಳೆ ರಾಣಿಯವರಿಂದ ಮಹಾರಾಜರ ಪಾದ ಪೂಜೆ ನೆರವೇರಿಸಿ, ಆಯುಧ ಪೂಜೆ ದಿನದ ಎಲ್ಲಾ ಪೂಜೆ ಕೈಂಕರ್ಯಗಳು ಮುಕ್ತಾಯವಾಗುತ್ತವೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

7 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

8 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

9 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

10 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

10 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

10 hours ago