ಮೈಸೂರು : ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿದ್ದು, ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರವೇರಿಸಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ಬಳಿಕ 7:55ಕ್ಕೆ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ಬಳಿಕ ಆಯುಧಗಳನ್ನು ಶುಚಿಗೊಳಿಸಿ ವಾಪಸ್ ಅರಮನೆಗೆ ರವಾನಿಸಲಾಗುತ್ತದೆ. ಅರಮನೆಯ ಆನೆಬಾಗಿಲು ಮೂಲಕ ಕಲ್ಯಾಟಮಂಟಪಕ್ಕೆ ಕೊಂಡೊಯ್ದು ಜೋಡಣೆ ಮಾಡಿ, ಸಿಂಹಾಸನಕ್ಕೆ ಜೋಡಿಸಿದ್ದ ಸಿಂಹಕ್ಕೆ ಪೂಜೆ ಮಾಡಲಾಗುತ್ತದೆ. ಆ ನಂತರ ರಾಜಪುರೋಹಿತರ ಮಾರ್ಗದರ್ಶನದಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯುಧ ಪೂಜೆ ನೆರವೇರಿಸಿದ್ದಾರೆ.
ಇದನ್ನೂ ಓದಿ:-ಬಿಜೆಪಿಯ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ- ಸಚಿವ ಪ್ರಿಯಾಂಕ್ ಖರ್ಗೆ
ಕರಿಕಲ್ಲು ತೊಟ್ಟಿಯಲ್ಲಿ ಯದುವೀರರಿಂದ ಪೂಜೆ ನಡೆಯುತ್ತಿದ್ದು, ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸು, ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆ ಮಾಡಲಾಗಿದೆ.
ಇನ್ನೂ ಸಂಜೆ ಖಾಸಗಿ ದರ್ಬಾರ್ ನಡೆಯಲಿದ್ದು, ಬೆಳ್ಳಿದ್ವಾರದಿಂದ ರಾಜರು ಪ್ರವೇಶಿಸುತ್ತಾರೆ. ಈ ಸಂದರ್ಭದಲ್ಲಿ ಹಸ್ತಲಾಘವದ ಮೂಲಕ ಸಿಂಹಾಸನದ ಏಳು ಮೆಟ್ಟಿಲು ಏರುತ್ತಾರೆ. ಸಿಂಹಾಸನವೇರಿ ರಾಜರು ದರ್ಬಾರ್ ಮಾಡುತ್ತಾರೆ. ದರ್ಬಾರ್ ಬಳಿಕ ಸಂಸ್ಥಾನ ಗೀತೆಯನ್ನು ಪೊಲೀಸ್ ಬ್ಯಾಂಡ್ನಲ್ಲಿ ನುಡಿಸಲಾಗುತ್ತದೆ. ಸಭಾಸದರು ರಾಜರಿಗೆ ಗೌರವ ಮತ್ತು ರಕ್ಷೆ ನೀಡುತ್ತಾರೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ರವರಿಗೆ ಪರಾಕ್ಗಳನ್ನ ಕೂಗಲಾಗುತ್ತದೆ. ರಾಣಿಯವರು ಬಂದು ರಾಜರಿಗೆ ನಮಸ್ಕರಿಸುತ್ತಾರೆ. ಬಳಿಕ ದರ್ಬಾರ್ ಮುಗಿಸಿ ಪೂಜೆ ನಡೆಸಲಾಗುತ್ತದೆ. ಬಳಿಕ ಕಂಕಣ ವಿಸರ್ಜನೆ ಮಾಡಿದಾಗ ನವರಾತ್ರಿ ಪೂಜೆ ಸಂಪನ್ನವಾಗುತ್ತದೆ. ಈ ವೇಳೆ ರಾಣಿಯವರಿಂದ ಮಹಾರಾಜರ ಪಾದ ಪೂಜೆ ನೆರವೇರಿಸಿ, ಆಯುಧ ಪೂಜೆ ದಿನದ ಎಲ್ಲಾ ಪೂಜೆ ಕೈಂಕರ್ಯಗಳು ಮುಕ್ತಾಯವಾಗುತ್ತವೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…