ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನ ಡಿಎವಿ ಪಬ್ಲಿಕ್ ಶಾಲೆಯಲ್ಲಿ ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದೆ.
ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಡಿಎವಿ ಪಬ್ಲಿಕ್ ಶಾಲೆಯಲ್ಲಿಂದು ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಬೊಂಬೆಗಳ ಪ್ರದರ್ಶನದ ಜೊತೆಗೆ ವಿದ್ಯಾರ್ಥಿಗಳು ಹಲವು ಮಾಹಿತಿಗಳನ್ನು ನೀಡುತ್ತಿದ್ದಾರೆ.
ವಿಷ್ಣುವಿನ ದಶಾವತಾರ, ನವದುರ್ಗೆಯರು, ಮಹಾಭಾರತದ ಸನ್ನಿವೇಶ, ದ್ರೌಪದಿ ವಸ್ತ್ರಾಪಹರಣ, ಅಷ್ಟ ಲಕ್ಷ್ಮಿಯರು, ಸರಸ್ವತಿ, ವರಮಹಾಲಕ್ಷ್ಮಿ, ಮಹಾಭಾರತ, ರಾಮಾಯಣ ಸೇರಿದಂತೆ ಬೊಂಬೆಗಳು ಪುರಾಣ ಕಥೆಗಳನ್ನು ಹೇಳುತ್ತಿವೆ.
ಮೈಸೂರು ರೈಲ್ವೆ ನಿಲ್ದಾಣ, ಮೈಸೂರು ವಿಶ್ವವಿದ್ಯಾನಿಲಯ, ಕೆಆರ್ಎಸ್ ಆಣೆಕಟ್ಟು, ಕೃಷ್ಣರಾಜ ಮಾರುಕಟ್ಟೆ, ಆಪರೇಷನ್ ಸಿಂಧೂರ್, ಆರ್ಸಿಬಿ ವಿಜಯೋತ್ಸವ, ನಿಮ್ಹಾನ್ಸ್ ಆಸ್ಪತ್ರೆ ಸೇರಿದಂತೆ ಹಲವು ಪ್ರೇಕ್ಷಣೀಯ ಸ್ಥಳಗಳು ವಿದ್ಯಾರ್ಥಿಗಳ ಕೈಚಳಕದಲ್ಲಿ ಆಕರ್ಷಕವಾಗಿ ಮೂಡಿ ಬಂದಿವೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…