ನಮ್ಮ ಮೈಸೂರ ದಸರಾ 2025

ದಸರಾ ಡ್ರೋನ್ ಶೋ: ಅನಧಿಕೃತವಾಗಿ ಡ್ರೋನ್ ವಿಡಿಯೋ ಚಿತ್ರೀಕರಣ ಮಾಡುವವರ ವಿರುದ್ಧ ಕ್ರಮ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅತಿದೊಡ್ಡ ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದ್ದು, ಸೆ.28, 29 ಹಾಗೂ ಅ.1 ಮತ್ತು 2ರಂದು ಅಭೂತಪೂರ್ವ ಪ್ರದರ್ಶನ ನಡೆಯಲಿದೆ.

ಆದರೆ ಡ್ರೋನ್ ಪ್ರದರ್ಶನ ನಡೆಯುವ ವೇಳೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ತಮ್ಮ ಡ್ರೋನ್‌ಗಳನ್ನು ಹಾರಿಸಿ ಸೆಸ್ಕ್‌ ವತಿಯಿಂದ ನಡೆಸಲಾಗುವ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಸೆರೆಹಿಡಿಯುವುದು ಹಾಗೂ ಡ್ರೋನ್‌ಗಳ ಮೂಲಕ ಚಿತ್ರೀಕರಿಸಿದ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡುವುದಕ್ಕೆ ನಿರ್ಬಂಧ ಹೇರಲಾಗಿದೆ.

ಇದನ್ನು ಓದಿ : ಮೈಸೂರು ದಸರಾ: ಪುಸ್ತಕ ಮೇಳದಲ್ಲಿ 4 ಪುಸ್ತಕಗಳ ಬಿಡುಗಡೆ

ಈ ಹಿನ್ನೆಲೆಯಲ್ಲಿ ಅನುಮತಿ ಪಡೆಯದೆ ಡ್ರೋನ್‌ಗಳನ್ನು ಹಾರಿಸಿ, ಸೆಸ್ಕ್ ವತಿಯಿಂದ ದಿನಾಂಕ: ಸೆ.28, 29 ಹಾಗೂ ಅ.1 ಮತ್ತು 2ರಂದು ನಡೆಸಲಾಗುವ ಡ್ರೋನ್ ಪ್ರದರ್ಶನದ ದೃಶ್ಯಗಳನ್ನು ಡ್ರೋನ್‌ಗಳ ಮೂಲಕ ಚಿತ್ರೀಕರಿಸಿ, ಡ್ರೋನ್‌ ಶೋ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಡುವುದು ಕಂಡುಬಂದಲ್ಲಿ ಅವರುಗಳ ವಿರುದ್ಧ ಸೈಬರ್ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮಕೈಗೊಳ್ಳಲು ಸೆಸ್ಕ್ ‌ನಿರ್ಧರಿಸಿದೆ.

ಆದ್ದರಿಂದ ಯಾವುದೇ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಸೆಸ್ಕ್ ವತಿಯಿಂದ ನಡೆಸಲಾಗುತ್ತಿರುವ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಡ್ರೋನ್‌ಗಳ ಮೂಲಕ ಅನಧಿಕೃತವಾಗಿ ಚಿತ್ರೀಕರಣ ಮಾಡದಂತೆ ಈ ಮೂಲಕ ಎಚ್ಚರಿಸಲಾಗಿದೆ. ಸೆಸ್ಕ್‌ ವತಿಯಿಂದ ನೀಡಲಾಗಿರುವ ಎಚ್ಚರಿಕೆ ನಡುವೆಯೂ ಯಾವುದೇ ವ್ಯಕ್ತಿಗಳು ಅಥವಾ ಸಂಸ್ಥೆಗಳು ಖಾಸಗಿಯಾಗಿ ಡ್ರೋನ್‌ ಪ್ರದರ್ಶನದ ದೃಶ್ಯಗಳನ್ನು ಚಿತ್ರೀಕರಿಸುವುದು ಕಂಡುಬಂದಲ್ಲಿ ಅಂತಹ ವ್ಯಕ್ತಿ ಮತ್ತು ಸಂಸ್ಥೆಗಳ ಡ್ರೋನ್‌ಗಳನ್ನು ವಶಕ್ಕೆ ಪಡೆದುಕೊಳ್ಳುವ ಮೂಲಕವೂ ಕ್ರಮವಹಿಸಲಾವುದು ಎಂದು ಸೆಸ್ಕ್‌ ಪ್ರಕಟಣೆಯಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

5 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

9 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

11 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

11 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

11 hours ago