ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಆನೆಗಳ ಜೊತೆ ಯುವತಿ ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ರೀಲ್ಸ್ ಮಾಡಿದ್ದ ಯುವತಿಯನ್ನು ಹುಡುಕಿ ದಂಡ ಹಾಕುವುದಕ್ಕೆ ಮುಂದಾಗಿದೆ.
ದಸರಾ ಆನೆ ಜೊತೆ ರೀಲ್ಸ್ ಮಾಡಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದ್ದಂತೆ ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆ ನಡೆಯಲು ಅರಣ್ಯ ಇಲಾಖೆ ಅಧಿಕಾರಿಗಳೇ ಕಾರಣ ಎಂದು ಕಮೆಂಟ್ ಮಾಡಿದ್ದರು. ವಿಡಿಯೋ ಫುಲ್ ವೈರಲ್ ಆಗುತ್ತಿದ್ದಂತೆ ಯುವತಿ ರೀಲ್ಸ್ ಡಿಲೀಟ್ ಮಾಡಿದ್ದಳು.
ಇದೀಗ ಈ ಪ್ರಕರಣದಿಂದ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ರೀಲ್ಸ್ ಮಾಡಿದ್ದ ಯುವತಿಯನ್ನು ಹುಡುಕಿ ದಂಡ ಹಾಕುವುದಕ್ಕೆ ಮುಂದಾಗಿದ್ದಾರೆ. ಜೊತೆಗೆ ಮಾವುತ ಹಾಗೂ ಕಾವಾಡಿ ಸೇರಿದಂತೆ ಅವರ ಕುಟುಂಬದವರನ್ನು ಹೊರತುಪಡಿಸಿ ಬೇರೆ ಸಾರ್ವಜನಿಕರಿಗೆ ಆನೆ ಶಿಬಿರಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
ಅನುಮತಿ ಇಲ್ಲದೆ ಆನೆಗಳ ಬಳಿ ತೆರಳಿದ್ದಕ್ಕೆ ಈಗಾಗಲೇ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಮೂವರಿಗೆ ದಂಡ ವಿಧಿಸಲಾಗಿದ್ದು, ನಾಡಹಬ್ಬ ಯಶಸ್ವಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಡಿಸಿಎಫ್ ಪ್ರಭುಗೌಡ ಮನವಿ ಮಾಡಿದ್ದಾರೆ.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್ಪಾತ್ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…