ನಮ್ಮ ಮೈಸೂರ ದಸರಾ 2025

ದಸರಾ ಆನೆ ಜೊತೆ ಯುವತಿ ರೀಲ್ಸ್ ಪ್ರಕರಣ: ದಂಡ ಹಾಕಲು ಮುಂದಾದ ಅರಣ್ಯ ಇಲಾಖೆ ಅಧಿಕಾರಿಗಳು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಆನೆಗಳ ಜೊತೆ ಯುವತಿ ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ರೀಲ್ಸ್ ಮಾಡಿದ್ದ ಯುವತಿಯನ್ನು ಹುಡುಕಿ ದಂಡ ಹಾಕುವುದಕ್ಕೆ ಮುಂದಾಗಿದೆ.

ದಸರಾ ಆನೆ ಜೊತೆ ರೀಲ್ಸ್‌ ಮಾಡಿದ್ದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗುತ್ತಿದ್ದಂತೆ ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆ ನಡೆಯಲು ಅರಣ್ಯ ಇಲಾಖೆ ಅಧಿಕಾರಿಗಳೇ ಕಾರಣ ಎಂದು ಕಮೆಂಟ್‌ ಮಾಡಿದ್ದರು. ವಿಡಿಯೋ ಫುಲ್‌ ವೈರಲ್‌ ಆಗುತ್ತಿದ್ದಂತೆ ಯುವತಿ ರೀಲ್ಸ್‌ ಡಿಲೀಟ್‌ ಮಾಡಿದ್ದಳು.

ಇದೀಗ ಈ ಪ್ರಕರಣದಿಂದ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ರೀಲ್ಸ್ ಮಾಡಿದ್ದ ಯುವತಿಯನ್ನು ಹುಡುಕಿ ದಂಡ ಹಾಕುವುದಕ್ಕೆ ಮುಂದಾಗಿದ್ದಾರೆ. ಜೊತೆಗೆ ಮಾವುತ ಹಾಗೂ ಕಾವಾಡಿ ಸೇರಿದಂತೆ ಅವರ ಕುಟುಂಬದವರನ್ನು ಹೊರತುಪಡಿಸಿ ಬೇರೆ ಸಾರ್ವಜನಿಕರಿಗೆ ಆನೆ ಶಿಬಿರಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

ಅನುಮತಿ ಇಲ್ಲದೆ ಆನೆಗಳ ಬಳಿ ತೆರಳಿದ್ದಕ್ಕೆ ಈಗಾಗಲೇ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಮೂವರಿಗೆ ದಂಡ ವಿಧಿಸಲಾಗಿದ್ದು, ನಾಡಹಬ್ಬ ಯಶಸ್ವಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಡಿಸಿಎಫ್ ಪ್ರಭುಗೌಡ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago