ಮೈಸೂರು

ದಸರಾ ಉದ್ಘಾಟನೆ ವಿವಾದ : ಚಾಮುಂಡಿ ಬೆಟ್ಟದಲ್ಲಿ ಮೆರವಣಿಗೆಗೆ ಅನುಮತಿ ನಿರಾಕರಣೆ

ಮೈಸೂರು : ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಂಗಳವಾರ ಕುರುಬರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟದವರೆಗೆ ನಡೆಯಬೇಕಿದ್ದ ಎರಡು ಪ್ರತ್ಯೇಕ ರ‍್ಯಾಲಿಗಳಿಗೆ ನಗರ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ರಾಜ್ಯ ಸರ್ಕಾರದ ಹಿಂದೂ ವಿರೋಧಿ ನಿಲುವನ್ನು ಹೊಂದಿದೆ ಎಂದು ಹಾಗೂ ಈ ವರ್ಷದ ದಸರಾ ಉತ್ಸವವನ್ನು ಉದ್ಘಾಟಿಸಲು ಹಿರಿಯ ಕನ್ನಡ ಬರಹಗಾರ್ತಿ ಮತ್ತು ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆಯ ಮೈಸೂರು ಜಿಲ್ಲಾ ಘಟಕವು ಮಂಗಳವಾರ ಬೆಳಿಗ್ಗೆ ೭.೩೦ ಕ್ಕೆ ಪಾದಯಾತ್ರೆಯನ್ನು ಯೋಜಿಸಿತ್ತು.

ಇದಕ್ಕೆ ಪ್ರತಿಕ್ರಿಯೆಯಾಗಿ, ದಲಿತ ಮಹಾಸಭಾವು ಬಾನು ಮುಷ್ತಾಕ್ ಅವರನ್ನು ಬೆಂಬಲಿಸಿ ಮೆರವಣಿಗೆಯನ್ನು ಘೋಷಿಸಿತ್ತು. ಎರಡೂ ರ‍್ಯಾಲಿಗಳು ಸೆ.೯ ರಂದು ಬೆಳಿಗ್ಗೆ ೭.೩೦ ಕ್ಕೆ ನಿಗದಿಯಾಗಿದ್ದವು, ಅವುಗಳ ಆರಂಭದ ಸ್ಥಳ ಮತ್ತು ಮಾರ್ಗ ಒಂದೇ ಆಗಿತ್ತು.

ಈ ಸಂಬಂದ ಮಾತನಾಡಿದ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಎರಡೂ ಕಡೆಯವರ ರ‍್ಯಾಲಿಗಳಿಗೆ ಅನುಮತಿ ನಿರಾಕರಿಸಲಾಗಿದೆ. ಕುರುಬರಹಳ್ಳಿ ವೃತ್ತದಲ್ಲಿ ಮತ್ತು ಪ್ರಸ್ತಾವಿತ ರ‍್ಯಾಲಿ ಮಾರ್ಗದಲ್ಲಿ ಭದ್ರತೆಗಾಗಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗುವುದು. ಯಾವುದೇ ಗುಂಪು ತಮ್ಮ ಉದ್ದೇಶಿತ ಮೆರವಣಿಗೆಗಳನ್ನು ನಡೆಸಲು ಅನುಮತಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕುರುಬರಹಳ್ಳಿ ವೃತ್ತ ಮತ್ತು ಚಾಮುಂಡಿ ಬೆಟ್ಟದ ಮಾರ್ಗದಲ್ಲಿ ಮಂಗಳವಾರ ಜನರು ಗುಂಪುಗೂಡದಂತೆ ಎಚ್ಚರಿಕೆ ನಿಡಿರುವ ಅವರು, ಗಲಭೆಗಳನ್ನು ನಡೆಸಲು ಮುಂದಾದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

5 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

6 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

6 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

6 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

6 hours ago