ಮೈಸೂರು

ದಸರಾ ಉದ್ಘಾಟನೆ ವಿವಾದ : ಚಾಮುಂಡಿ ಬೆಟ್ಟದಲ್ಲಿ ಮೆರವಣಿಗೆಗೆ ಅನುಮತಿ ನಿರಾಕರಣೆ

ಮೈಸೂರು : ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಂಗಳವಾರ ಕುರುಬರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟದವರೆಗೆ ನಡೆಯಬೇಕಿದ್ದ ಎರಡು ಪ್ರತ್ಯೇಕ ರ‍್ಯಾಲಿಗಳಿಗೆ ನಗರ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ರಾಜ್ಯ ಸರ್ಕಾರದ ಹಿಂದೂ ವಿರೋಧಿ ನಿಲುವನ್ನು ಹೊಂದಿದೆ ಎಂದು ಹಾಗೂ ಈ ವರ್ಷದ ದಸರಾ ಉತ್ಸವವನ್ನು ಉದ್ಘಾಟಿಸಲು ಹಿರಿಯ ಕನ್ನಡ ಬರಹಗಾರ್ತಿ ಮತ್ತು ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆಯ ಮೈಸೂರು ಜಿಲ್ಲಾ ಘಟಕವು ಮಂಗಳವಾರ ಬೆಳಿಗ್ಗೆ ೭.೩೦ ಕ್ಕೆ ಪಾದಯಾತ್ರೆಯನ್ನು ಯೋಜಿಸಿತ್ತು.

ಇದಕ್ಕೆ ಪ್ರತಿಕ್ರಿಯೆಯಾಗಿ, ದಲಿತ ಮಹಾಸಭಾವು ಬಾನು ಮುಷ್ತಾಕ್ ಅವರನ್ನು ಬೆಂಬಲಿಸಿ ಮೆರವಣಿಗೆಯನ್ನು ಘೋಷಿಸಿತ್ತು. ಎರಡೂ ರ‍್ಯಾಲಿಗಳು ಸೆ.೯ ರಂದು ಬೆಳಿಗ್ಗೆ ೭.೩೦ ಕ್ಕೆ ನಿಗದಿಯಾಗಿದ್ದವು, ಅವುಗಳ ಆರಂಭದ ಸ್ಥಳ ಮತ್ತು ಮಾರ್ಗ ಒಂದೇ ಆಗಿತ್ತು.

ಈ ಸಂಬಂದ ಮಾತನಾಡಿದ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಎರಡೂ ಕಡೆಯವರ ರ‍್ಯಾಲಿಗಳಿಗೆ ಅನುಮತಿ ನಿರಾಕರಿಸಲಾಗಿದೆ. ಕುರುಬರಹಳ್ಳಿ ವೃತ್ತದಲ್ಲಿ ಮತ್ತು ಪ್ರಸ್ತಾವಿತ ರ‍್ಯಾಲಿ ಮಾರ್ಗದಲ್ಲಿ ಭದ್ರತೆಗಾಗಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗುವುದು. ಯಾವುದೇ ಗುಂಪು ತಮ್ಮ ಉದ್ದೇಶಿತ ಮೆರವಣಿಗೆಗಳನ್ನು ನಡೆಸಲು ಅನುಮತಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕುರುಬರಹಳ್ಳಿ ವೃತ್ತ ಮತ್ತು ಚಾಮುಂಡಿ ಬೆಟ್ಟದ ಮಾರ್ಗದಲ್ಲಿ ಮಂಗಳವಾರ ಜನರು ಗುಂಪುಗೂಡದಂತೆ ಎಚ್ಚರಿಕೆ ನಿಡಿರುವ ಅವರು, ಗಲಭೆಗಳನ್ನು ನಡೆಸಲು ಮುಂದಾದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

6 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

19 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

19 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

20 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

20 hours ago