ಮೈಸೂರು

ದಸರಾ ಉದ್ಘಾಟನೆ ವಿವಾದ : ಚಾಮುಂಡಿ ಬೆಟ್ಟದಲ್ಲಿ ಮೆರವಣಿಗೆಗೆ ಅನುಮತಿ ನಿರಾಕರಣೆ

ಮೈಸೂರು : ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಂಗಳವಾರ ಕುರುಬರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟದವರೆಗೆ ನಡೆಯಬೇಕಿದ್ದ ಎರಡು ಪ್ರತ್ಯೇಕ ರ‍್ಯಾಲಿಗಳಿಗೆ ನಗರ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ರಾಜ್ಯ ಸರ್ಕಾರದ ಹಿಂದೂ ವಿರೋಧಿ ನಿಲುವನ್ನು ಹೊಂದಿದೆ ಎಂದು ಹಾಗೂ ಈ ವರ್ಷದ ದಸರಾ ಉತ್ಸವವನ್ನು ಉದ್ಘಾಟಿಸಲು ಹಿರಿಯ ಕನ್ನಡ ಬರಹಗಾರ್ತಿ ಮತ್ತು ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆಯ ಮೈಸೂರು ಜಿಲ್ಲಾ ಘಟಕವು ಮಂಗಳವಾರ ಬೆಳಿಗ್ಗೆ ೭.೩೦ ಕ್ಕೆ ಪಾದಯಾತ್ರೆಯನ್ನು ಯೋಜಿಸಿತ್ತು.

ಇದಕ್ಕೆ ಪ್ರತಿಕ್ರಿಯೆಯಾಗಿ, ದಲಿತ ಮಹಾಸಭಾವು ಬಾನು ಮುಷ್ತಾಕ್ ಅವರನ್ನು ಬೆಂಬಲಿಸಿ ಮೆರವಣಿಗೆಯನ್ನು ಘೋಷಿಸಿತ್ತು. ಎರಡೂ ರ‍್ಯಾಲಿಗಳು ಸೆ.೯ ರಂದು ಬೆಳಿಗ್ಗೆ ೭.೩೦ ಕ್ಕೆ ನಿಗದಿಯಾಗಿದ್ದವು, ಅವುಗಳ ಆರಂಭದ ಸ್ಥಳ ಮತ್ತು ಮಾರ್ಗ ಒಂದೇ ಆಗಿತ್ತು.

ಈ ಸಂಬಂದ ಮಾತನಾಡಿದ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಎರಡೂ ಕಡೆಯವರ ರ‍್ಯಾಲಿಗಳಿಗೆ ಅನುಮತಿ ನಿರಾಕರಿಸಲಾಗಿದೆ. ಕುರುಬರಹಳ್ಳಿ ವೃತ್ತದಲ್ಲಿ ಮತ್ತು ಪ್ರಸ್ತಾವಿತ ರ‍್ಯಾಲಿ ಮಾರ್ಗದಲ್ಲಿ ಭದ್ರತೆಗಾಗಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗುವುದು. ಯಾವುದೇ ಗುಂಪು ತಮ್ಮ ಉದ್ದೇಶಿತ ಮೆರವಣಿಗೆಗಳನ್ನು ನಡೆಸಲು ಅನುಮತಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕುರುಬರಹಳ್ಳಿ ವೃತ್ತ ಮತ್ತು ಚಾಮುಂಡಿ ಬೆಟ್ಟದ ಮಾರ್ಗದಲ್ಲಿ ಮಂಗಳವಾರ ಜನರು ಗುಂಪುಗೂಡದಂತೆ ಎಚ್ಚರಿಕೆ ನಿಡಿರುವ ಅವರು, ಗಲಭೆಗಳನ್ನು ನಡೆಸಲು ಮುಂದಾದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

7 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

7 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

7 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

9 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

10 hours ago