ಮೈಸೂರು

ದಸರಾ ಉದ್ಘಾಟನೆ ವಿವಾದ : ಚಾಮುಂಡಿ ಬೆಟ್ಟದಲ್ಲಿ ಮೆರವಣಿಗೆಗೆ ಅನುಮತಿ ನಿರಾಕರಣೆ

ಮೈಸೂರು : ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಂಗಳವಾರ ಕುರುಬರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟದವರೆಗೆ ನಡೆಯಬೇಕಿದ್ದ ಎರಡು ಪ್ರತ್ಯೇಕ ರ‍್ಯಾಲಿಗಳಿಗೆ ನಗರ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ರಾಜ್ಯ ಸರ್ಕಾರದ ಹಿಂದೂ ವಿರೋಧಿ ನಿಲುವನ್ನು ಹೊಂದಿದೆ ಎಂದು ಹಾಗೂ ಈ ವರ್ಷದ ದಸರಾ ಉತ್ಸವವನ್ನು ಉದ್ಘಾಟಿಸಲು ಹಿರಿಯ ಕನ್ನಡ ಬರಹಗಾರ್ತಿ ಮತ್ತು ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆಯ ಮೈಸೂರು ಜಿಲ್ಲಾ ಘಟಕವು ಮಂಗಳವಾರ ಬೆಳಿಗ್ಗೆ ೭.೩೦ ಕ್ಕೆ ಪಾದಯಾತ್ರೆಯನ್ನು ಯೋಜಿಸಿತ್ತು.

ಇದಕ್ಕೆ ಪ್ರತಿಕ್ರಿಯೆಯಾಗಿ, ದಲಿತ ಮಹಾಸಭಾವು ಬಾನು ಮುಷ್ತಾಕ್ ಅವರನ್ನು ಬೆಂಬಲಿಸಿ ಮೆರವಣಿಗೆಯನ್ನು ಘೋಷಿಸಿತ್ತು. ಎರಡೂ ರ‍್ಯಾಲಿಗಳು ಸೆ.೯ ರಂದು ಬೆಳಿಗ್ಗೆ ೭.೩೦ ಕ್ಕೆ ನಿಗದಿಯಾಗಿದ್ದವು, ಅವುಗಳ ಆರಂಭದ ಸ್ಥಳ ಮತ್ತು ಮಾರ್ಗ ಒಂದೇ ಆಗಿತ್ತು.

ಈ ಸಂಬಂದ ಮಾತನಾಡಿದ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಎರಡೂ ಕಡೆಯವರ ರ‍್ಯಾಲಿಗಳಿಗೆ ಅನುಮತಿ ನಿರಾಕರಿಸಲಾಗಿದೆ. ಕುರುಬರಹಳ್ಳಿ ವೃತ್ತದಲ್ಲಿ ಮತ್ತು ಪ್ರಸ್ತಾವಿತ ರ‍್ಯಾಲಿ ಮಾರ್ಗದಲ್ಲಿ ಭದ್ರತೆಗಾಗಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗುವುದು. ಯಾವುದೇ ಗುಂಪು ತಮ್ಮ ಉದ್ದೇಶಿತ ಮೆರವಣಿಗೆಗಳನ್ನು ನಡೆಸಲು ಅನುಮತಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕುರುಬರಹಳ್ಳಿ ವೃತ್ತ ಮತ್ತು ಚಾಮುಂಡಿ ಬೆಟ್ಟದ ಮಾರ್ಗದಲ್ಲಿ ಮಂಗಳವಾರ ಜನರು ಗುಂಪುಗೂಡದಂತೆ ಎಚ್ಚರಿಕೆ ನಿಡಿರುವ ಅವರು, ಗಲಭೆಗಳನ್ನು ನಡೆಸಲು ಮುಂದಾದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

14 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

14 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

14 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

14 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

14 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

17 hours ago