ನಮ್ಮ ಮೈಸೂರ ದಸರಾ 2025

ದಸರಾ ದೀಪಾಲಂಕಾರ, ಡ್ರೋನ್ ಶೋ ಪೋಸ್ಟರ್ ಬಿಡುಗಡೆ

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ವಿದ್ಯುತ್ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಹಾಗೂ ದೀಪಾಲಂಕಾರದ ಟೀಸರ್ ಬಿಡುಗಡೆಗೊಳಿಸಲಾಯಿತು.

ಅರಮನೆ ಆಡಳಿತ ಮಂಡಳಿ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ವತಿಯಿಂದ ನಡೆಸಲಾಗುವ ದಸರಾ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಬಿಡುಗಡೆಗೊಳಿಸಿ, ಟೀಸರ್ ಅನಾವರಣಗೊಳಿಸಿದರು.

ಎಂದಿನಂತೆ ಈ ಬಾರಿಯೂ ಸೆಸ್ಕ್ ವತಿಯಿಂದ ದೀಪಾಲಂಕಾರ ಮಾಡಲಾಗುತ್ತಿದ್ದು, ನಗರದ 135 ಕಿ.ಮೀ ವ್ಯಾಪ್ತಿಯ ರಸ್ತೆಗಳು ಹಾಗೂ 118 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗುತ್ತಿದೆ. ಅವುಗಳೊಂದಿಗೆ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ಆಕರ್ಷಕ ಪ್ರತಿಕೃತಿಗಳನ್ನು ಇರಿಸಲಾಗುತ್ತದೆ. ದೀಪಾಲಂಕಾರಕ್ಕಾಗಿ 300 ಕಿಲೋ ವ್ಯಾಟ್ ಗಳ, 257520 ಯೂನಿಟ್ ಗಳ ವಿದ್ಯುತ್ ಬಳಕೆ ಮಾಡಲಾಗುತ್ತಿದೆ.

ಆಕರ್ಷಕ ಡ್ರೋನ್ ಶೋ
ದಸರಾ ಮಹೋತ್ಸವದ ಸಂಭ್ರಮಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಡ್ರೋನ್ ಪ್ರದರ್ಶನ ಈ ಬಾರಿ ಮತ್ತಷ್ಟು ಆಕರ್ಷಣೀಯವಾಗಿರಲಿದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆ.28, 29 ಮತ್ತು ಅಕ್ಟೋಬರ್ 1 ಮತ್ತು 2ರಂದು ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದೆ. ಕಳೆದ ಬಾರಿ 1500 ಡ್ರೋನ್ ಬಳಸಿಕೊಂಡು ನಡೆಸಲಾಗಿದ್ದ ಡ್ರೋನ್ ಪ್ರದರ್ಶನದಲ್ಲಿ ಈ ಬಾರಿ 3000 ಸಾವಿರ ಡ್ರೋನ್ ಬಳಸಿಕೊಂಡು ನಡೆಸಲಾಗುತ್ತಿದೆ.

ಅಗತ್ಯ ಸುರಕ್ಷತಾ ಕ್ರಮಗಳು
ಈ ಬಾರಿಯ ದಸರಾ ವಿದ್ಯುತ್ ದೀಪಾಲಂಕಾರದಲ್ಲಿ ಸೆಸ್ಕ್ ವತಿಯಿಂದ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, ಆ ಮೂಲಕ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಪ್ರಮುಖವಾಗಿ ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳುವುದು, ದೀಪಾಲಂಕಾರದ ಕಂಬಗಳ ಹತ್ತಿರ ನಿಂತು ಫೋಟೋ/ವಿಡಿಯೋ ಶೂಟ್‌ ಮಾಡುವುದನ್ನು ತಪ್ಪಿಸುವುದು, ಮಳೆ ಸಂದರ್ಭದಲ್ಲಿ ವಿದ್ಯುತ್‌/ದೀಪಾಲಂಕಾರದ ಕಂಬಗಳ ಹತ್ತಿರ ಹೋಗದೆ ಎಚ್ಚರವಹಿಸುವುದು ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ವಾಹನ ಸವಾರರು ಈ ಬಗ್ಗೆ ನಿಗಾವಹಿಸಿ ಸುರಕ್ಷಿತವಾಗಿ ಸಂಚರಿಸುವಂತೆ ಹಾಗೂ ವಿದ್ಯುತ್‌ ಸಂಬಂಧಿತ ದೂರು/ದೀಪಾಲಂಕಾರದಿಂದ ತೊಂದರೆ ಆದಲ್ಲಿ 24×7 ಸಹಾಯವಾಣಿ 1912 ಸಂಪರ್ಕಿಸುವಂತೆ ಕೋರಲಾಗಿದೆ.

ಈ ಸಂದರ್ಭದಲ್ಲಿ ಶಾಸಕರು ಹಾಗೂ ಸೆಸ್ಕ್ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು, ಜಿಪಂ ಸಿಇಒ ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸೀಫ್, ಸೆಸ್ಕ್ ಅಧೀಕ್ಷಕ ಇಂಜಿನಿಯರ್ ಸುನೀಲ್ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳು ಇದ್ದರು.

ಆಂದೋಲನ ಡೆಸ್ಕ್

Recent Posts

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

18 mins ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

19 mins ago

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…

41 mins ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ಸಾವು ಪ್ರಕರಣ: ದುರಂತದ ಸಂಪೂರ್ಣ ತನಿಖೆಯಾಗಲಿದೆ ಎಂದ ಯದುವೀರ್‌ ಒಡೆಯರ್‌

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…

1 hour ago

ಶಾಲಾ ವಾಹನವನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ: ಭಯಭೀತರಾದ ವಿದ್ಯಾರ್ಥಿಗಳು

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…

2 hours ago

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ: ಮಹದೇಶ್ವರ ಬೆಟ್ಟಕ್ಕೆ ಹೋಗದಂತೆ ಇಮ್ಮಡಿ ಮಹದೇವಸ್ವಾಮಿಗೆ ನಿರ್ಬಂಧ

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…

2 hours ago