ನಮ್ಮ ಮೈಸೂರ ದಸರಾ 2025

ದಸರಾ ದೀಪಾಲಂಕಾರ, ಡ್ರೋನ್ ಶೋ ಪೋಸ್ಟರ್ ಬಿಡುಗಡೆ

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ವಿದ್ಯುತ್ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಹಾಗೂ ದೀಪಾಲಂಕಾರದ ಟೀಸರ್ ಬಿಡುಗಡೆಗೊಳಿಸಲಾಯಿತು.

ಅರಮನೆ ಆಡಳಿತ ಮಂಡಳಿ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ವತಿಯಿಂದ ನಡೆಸಲಾಗುವ ದಸರಾ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಬಿಡುಗಡೆಗೊಳಿಸಿ, ಟೀಸರ್ ಅನಾವರಣಗೊಳಿಸಿದರು.

ಎಂದಿನಂತೆ ಈ ಬಾರಿಯೂ ಸೆಸ್ಕ್ ವತಿಯಿಂದ ದೀಪಾಲಂಕಾರ ಮಾಡಲಾಗುತ್ತಿದ್ದು, ನಗರದ 135 ಕಿ.ಮೀ ವ್ಯಾಪ್ತಿಯ ರಸ್ತೆಗಳು ಹಾಗೂ 118 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗುತ್ತಿದೆ. ಅವುಗಳೊಂದಿಗೆ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ಆಕರ್ಷಕ ಪ್ರತಿಕೃತಿಗಳನ್ನು ಇರಿಸಲಾಗುತ್ತದೆ. ದೀಪಾಲಂಕಾರಕ್ಕಾಗಿ 300 ಕಿಲೋ ವ್ಯಾಟ್ ಗಳ, 257520 ಯೂನಿಟ್ ಗಳ ವಿದ್ಯುತ್ ಬಳಕೆ ಮಾಡಲಾಗುತ್ತಿದೆ.

ಆಕರ್ಷಕ ಡ್ರೋನ್ ಶೋ
ದಸರಾ ಮಹೋತ್ಸವದ ಸಂಭ್ರಮಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಡ್ರೋನ್ ಪ್ರದರ್ಶನ ಈ ಬಾರಿ ಮತ್ತಷ್ಟು ಆಕರ್ಷಣೀಯವಾಗಿರಲಿದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆ.28, 29 ಮತ್ತು ಅಕ್ಟೋಬರ್ 1 ಮತ್ತು 2ರಂದು ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದೆ. ಕಳೆದ ಬಾರಿ 1500 ಡ್ರೋನ್ ಬಳಸಿಕೊಂಡು ನಡೆಸಲಾಗಿದ್ದ ಡ್ರೋನ್ ಪ್ರದರ್ಶನದಲ್ಲಿ ಈ ಬಾರಿ 3000 ಸಾವಿರ ಡ್ರೋನ್ ಬಳಸಿಕೊಂಡು ನಡೆಸಲಾಗುತ್ತಿದೆ.

ಅಗತ್ಯ ಸುರಕ್ಷತಾ ಕ್ರಮಗಳು
ಈ ಬಾರಿಯ ದಸರಾ ವಿದ್ಯುತ್ ದೀಪಾಲಂಕಾರದಲ್ಲಿ ಸೆಸ್ಕ್ ವತಿಯಿಂದ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, ಆ ಮೂಲಕ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಪ್ರಮುಖವಾಗಿ ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳುವುದು, ದೀಪಾಲಂಕಾರದ ಕಂಬಗಳ ಹತ್ತಿರ ನಿಂತು ಫೋಟೋ/ವಿಡಿಯೋ ಶೂಟ್‌ ಮಾಡುವುದನ್ನು ತಪ್ಪಿಸುವುದು, ಮಳೆ ಸಂದರ್ಭದಲ್ಲಿ ವಿದ್ಯುತ್‌/ದೀಪಾಲಂಕಾರದ ಕಂಬಗಳ ಹತ್ತಿರ ಹೋಗದೆ ಎಚ್ಚರವಹಿಸುವುದು ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ವಾಹನ ಸವಾರರು ಈ ಬಗ್ಗೆ ನಿಗಾವಹಿಸಿ ಸುರಕ್ಷಿತವಾಗಿ ಸಂಚರಿಸುವಂತೆ ಹಾಗೂ ವಿದ್ಯುತ್‌ ಸಂಬಂಧಿತ ದೂರು/ದೀಪಾಲಂಕಾರದಿಂದ ತೊಂದರೆ ಆದಲ್ಲಿ 24×7 ಸಹಾಯವಾಣಿ 1912 ಸಂಪರ್ಕಿಸುವಂತೆ ಕೋರಲಾಗಿದೆ.

ಈ ಸಂದರ್ಭದಲ್ಲಿ ಶಾಸಕರು ಹಾಗೂ ಸೆಸ್ಕ್ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು, ಜಿಪಂ ಸಿಇಒ ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸೀಫ್, ಸೆಸ್ಕ್ ಅಧೀಕ್ಷಕ ಇಂಜಿನಿಯರ್ ಸುನೀಲ್ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳು ಇದ್ದರು.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

2 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

3 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

3 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

6 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

9 hours ago