dasra drone show
ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ವಿದ್ಯುತ್ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಹಾಗೂ ದೀಪಾಲಂಕಾರದ ಟೀಸರ್ ಬಿಡುಗಡೆಗೊಳಿಸಲಾಯಿತು.
ಅರಮನೆ ಆಡಳಿತ ಮಂಡಳಿ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ವತಿಯಿಂದ ನಡೆಸಲಾಗುವ ದಸರಾ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಬಿಡುಗಡೆಗೊಳಿಸಿ, ಟೀಸರ್ ಅನಾವರಣಗೊಳಿಸಿದರು.
ಎಂದಿನಂತೆ ಈ ಬಾರಿಯೂ ಸೆಸ್ಕ್ ವತಿಯಿಂದ ದೀಪಾಲಂಕಾರ ಮಾಡಲಾಗುತ್ತಿದ್ದು, ನಗರದ 135 ಕಿ.ಮೀ ವ್ಯಾಪ್ತಿಯ ರಸ್ತೆಗಳು ಹಾಗೂ 118 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗುತ್ತಿದೆ. ಅವುಗಳೊಂದಿಗೆ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ಆಕರ್ಷಕ ಪ್ರತಿಕೃತಿಗಳನ್ನು ಇರಿಸಲಾಗುತ್ತದೆ. ದೀಪಾಲಂಕಾರಕ್ಕಾಗಿ 300 ಕಿಲೋ ವ್ಯಾಟ್ ಗಳ, 257520 ಯೂನಿಟ್ ಗಳ ವಿದ್ಯುತ್ ಬಳಕೆ ಮಾಡಲಾಗುತ್ತಿದೆ.
ಆಕರ್ಷಕ ಡ್ರೋನ್ ಶೋ
ದಸರಾ ಮಹೋತ್ಸವದ ಸಂಭ್ರಮಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಡ್ರೋನ್ ಪ್ರದರ್ಶನ ಈ ಬಾರಿ ಮತ್ತಷ್ಟು ಆಕರ್ಷಣೀಯವಾಗಿರಲಿದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆ.28, 29 ಮತ್ತು ಅಕ್ಟೋಬರ್ 1 ಮತ್ತು 2ರಂದು ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದೆ. ಕಳೆದ ಬಾರಿ 1500 ಡ್ರೋನ್ ಬಳಸಿಕೊಂಡು ನಡೆಸಲಾಗಿದ್ದ ಡ್ರೋನ್ ಪ್ರದರ್ಶನದಲ್ಲಿ ಈ ಬಾರಿ 3000 ಸಾವಿರ ಡ್ರೋನ್ ಬಳಸಿಕೊಂಡು ನಡೆಸಲಾಗುತ್ತಿದೆ.
ಅಗತ್ಯ ಸುರಕ್ಷತಾ ಕ್ರಮಗಳು
ಈ ಬಾರಿಯ ದಸರಾ ವಿದ್ಯುತ್ ದೀಪಾಲಂಕಾರದಲ್ಲಿ ಸೆಸ್ಕ್ ವತಿಯಿಂದ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, ಆ ಮೂಲಕ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಪ್ರಮುಖವಾಗಿ ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳುವುದು, ದೀಪಾಲಂಕಾರದ ಕಂಬಗಳ ಹತ್ತಿರ ನಿಂತು ಫೋಟೋ/ವಿಡಿಯೋ ಶೂಟ್ ಮಾಡುವುದನ್ನು ತಪ್ಪಿಸುವುದು, ಮಳೆ ಸಂದರ್ಭದಲ್ಲಿ ವಿದ್ಯುತ್/ದೀಪಾಲಂಕಾರದ ಕಂಬಗಳ ಹತ್ತಿರ ಹೋಗದೆ ಎಚ್ಚರವಹಿಸುವುದು ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ವಾಹನ ಸವಾರರು ಈ ಬಗ್ಗೆ ನಿಗಾವಹಿಸಿ ಸುರಕ್ಷಿತವಾಗಿ ಸಂಚರಿಸುವಂತೆ ಹಾಗೂ ವಿದ್ಯುತ್ ಸಂಬಂಧಿತ ದೂರು/ದೀಪಾಲಂಕಾರದಿಂದ ತೊಂದರೆ ಆದಲ್ಲಿ 24×7 ಸಹಾಯವಾಣಿ 1912 ಸಂಪರ್ಕಿಸುವಂತೆ ಕೋರಲಾಗಿದೆ.
ಈ ಸಂದರ್ಭದಲ್ಲಿ ಶಾಸಕರು ಹಾಗೂ ಸೆಸ್ಕ್ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು, ಜಿಪಂ ಸಿಇಒ ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸೀಫ್, ಸೆಸ್ಕ್ ಅಧೀಕ್ಷಕ ಇಂಜಿನಿಯರ್ ಸುನೀಲ್ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳು ಇದ್ದರು.
ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…
ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…
ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ…
ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…
ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…