ನಮ್ಮ ಮೈಸೂರ ದಸರಾ 2025

ಶ್ವಾನ ಪ್ರದರ್ಶನ : ಜರ್ಮನ್ ಶಫರ್ಡ್‌ಗೆ ಮೊದಲ ಸ್ಥಾನ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಡೆದ ಶ್ವಾನ ಮತ್ತು ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯಲ್ಲಿ ಜರ್ಮನ್ ಶಫರ್ಡ್ ತಳಿಯ ಮೈಸೂರು ಶ್ವಾನಕ್ಕೆ ಮೊದಲ ಸ್ಥಾನ ದೊರೆಯಿತು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ರೈತ ದಸರಾ ಉಪ ಸಮಿತಿ ವತಿಯಿಂದ ನಗರದ ಜೆ.ಕೆ.ಮೈದಾನದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಶ್ವಾನ ಮತ್ತು ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಿತು.

ಮೈಸೂರು, ಮಂಡ್ಯ, ಬೆಂಗಳೂರು, ಹೊರ ರಾಜ್ಯ ಕೇರಳ ಹಾಗೂ ಊಟಿ ಸೇರಿದಂತೆ ವಿವಿಧ ಭಾಗಗಳಿಂದ ಒಟ್ಟು 640 ಶ್ವಾನಗಳು ನೋಂದಣಿಯಾಗಿದ್ದವು. ಸೈಬಿರಿಯಾ ಹಷ್ಕಿ, ಜರ್ಮನ್ ಶಫರ್ಡ್ , ಮುಧೋಳ ಹಾಗೂ ಪಾರಿನ್ ನ ಒಟ್ಟು 51 ತಳಿಯ ಶ್ವಾನಗಳು ಸ್ಪರ್ಧೆಯಲ್ಲಿ ಪಾಲ್ಲೊಂಡಿದ್ದವು ಅಂತಿಮವಾಗಿ 7 ತಳಿಗಳು ಜಯಶೀಲ ಆದವು ಅವುಗಳ ಮಾಲೀಕರಿಗೆ ಪ್ರಮಾಣ ಪತ್ರ ಹಾಗೂ ಆಕರ್ಷಕ ಟ್ರೋಪಿಯನ್ನು ನೀಡಲಾಯಿತು.

ಇದನ್ನೂ ಓದಿ:-ಮೈಸೂರು | ಸಮೀಕ್ಷೆಗೆ ಗೈರು ; 8 ಸಹ ಶಿಕ್ಷಕರು ಅಮಾನತು

ಶ್ವಾನಗಳ ನಡಿಗೆ, ಚರ್ಮದ ಬಣ್ಣ ಹಾಗೂ ಗುಣ ಲಕ್ಷಣಗಳನ್ನು ಆಧರಿಸಿ ತೀರ್ಪುಗಾರರಾದ ಡಾ. ಅಜೀಂ ಹುಲ್ಲಾ, ಡಾ.ಕೆ.ಟಿ.ಪರಮೇಶ್ವರ್, ಡಾ.ಬಸವರಾಜು ಹಾಗೂ ಡಾ.ಭಟ್ ಅವರು ಜಯಶೀಲ ತಳಿಗಳ ಹೆಸರನ್ನು ಘೋಷಿಸಿದರು.

ಜರ್ಮನ್ ಶಫರ್ಡ್ ತಳಿಗೆ ಮೊದಲ, ಬಾಕ್ಸರ್ ತಳಿಗೆ ದ್ವೀತೀಯ, ರಾಟ್ ವಲರ್ ತಳಿಗೆ ಮೂರನೇ, ಡಾಬರ್ ವೆಲಸ್ ನಾಲ್ಕನೆ, ಮಾಲ್ವಿಸ್ ತಳಿಗೆ ಐದನೇ, ಮುಧೋಳ್ ತಳಿಗೆ ಆರನೇ ಹಾಗೂ ಸೈಬೇರಿಯನ್ ಹಸ್ಕಿ ತಳಿಗೆ ಏಳನೇ ಸ್ಥಾನಗಳು ದೊರೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಅಭಿವೃದ್ಧಿ) ಭೀಮಪ್ಪ ಕೆ. ಲಾಳಿ ಅವರು, ಪಶುಪಾಲನ ಮತ್ತು ಪಶು ವೈದ್ಯಕೀಯ ಉಪನಿರ್ದೇಶಕರು (ಆಡಳಿತ) ಡಾ.ನಾಗರಾಜು ಅವರು, ಉಪನಿರ್ದೇಶಕರು (ಪಾಲಿ ಕ್ಲಿನಿಕ್) ಡಾ.ರಮೇಶ್ ಅವರು, ಸಹಾಯಕ ನಿರ್ದೇಶಕರಾದ ಡಾ.ಪೂರ್ಣನಂದ ಸೇರಿದಂತೆ ಇತರರು ಇದ್ದರು.

ಆಂದೋಲನ ಡೆಸ್ಕ್

Recent Posts

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

4 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

1 hour ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

2 hours ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

3 hours ago